ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ವರಕವಿ ಮುದ್ದಣನ 153ನೇ ವರ್ಷದ ಜನ್ಮ ದಿನಾಚರಣೆ

ನಂದಳಿಕೆ: ನೆಹರು ಯುವ ಕೇಂದ್ರ ಉಡುಪಿ, ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಇದರ ಸಹಯೋಗದಲ್ಲಿ ನಂದಳಿಕೆ ವರಕವಿ ಮುದ್ದಣನ 153ನೇ ವರ್ಷದ ಜನ್ಮ ದಿನಾಚರಣೆ ಕಾರ್ಯಕ್ರಮ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ರಂಗಮಂದಿರದಲ್ಲಿ ಮಂಗಳವಾರ ನಡೆಸಲಾಯಿತು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷ ಪ್ರಶಾಂತ್ ಪೂಜಾರಿ ಮುದ್ದಣನ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದವರು ನಂದಳಿಕೆಯ ಪುಣ್ಯ ಮಣ್ಣಿನಲ್ಲಿ ಜನಿಸಿದ ಮುದ್ದಣ (ಲಕ್ಷ್ಮೀನಾರಾಯಣಪ್ಪ) ನಂದಳಿಕೆಯ ಹೆಸರನ್ನು ಸಾಹಿತ್ಯ ಲೋಕದಲ್ಲಿ ರಾಷ್ಟ್ರ ಮಟ್ಟದಲ್ಲಿ ಹೆಸರಿಸುವಂತೆ ಮಾಡಿದ ಮಹಾನ್ ಸಾಧಕ. ಜೀವನವಿಡಿ ಕಷ್ಟಗಳ ಕಹಿಯುಂಡ ಮುದ್ದಣ ಸಾರಸ್ವತ ಲೋಕಕ್ಕೆ ಮಹಾನ್ ಕೃತಿಗಳನ್ನು ನೀಡಿದ ಹಿರಿಮೆಯೊಂದಿಗೆ ಅವರ ಹೆಸರು ಚಿರಸ್ಥಾಯಿಯಾಗಿಸಿವೆ ಎಂದರು.
ಈ ಸಂದರ್ಭದಲ್ಲಿ ಸಂಘದ ಪೂರ್ವಾಧ್ಯಕ್ಷರಾದ ಸುರೇಶ್ ಕಾಸ್ರಬೈಲು, ಕಾರ್ಯದರ್ಶಿ ಲ ಲಲಿತಾ ಆಚಾರ್ಯ, ಜೊತೆ ಕಾರ್ಯದರ್ಶಿ ಸುದರ್ಶನ್ ಕುಂದರ್, ಮಹಿಳಾ ಸಂಘಟನಾ ಕಾರ್ಯದರ್ಶಿ ಪದ್ಮಶ್ರೀ ಅಬ್ಬನಡ್ಕ, ಅಬ್ಬನಡ್ಕ ಸ್ವಸಹಾಐ ಸಂಘದ ಅಧ್ಯಕ್ಷೆ ವೀಣಾ ಪೂಜಾರಿ, ಕಾರ್ಯದರ್ಶಿ ಪುಷ್ಪ ಕುಲಾಲ್, ಅಬ್ಬನಡ್ಕ ಭಜನಾ ಮಂಡಳಿ ಅಧ್ಯಕ್ಷೆ ಸುಲೋಚನಾ ಕೋಟ್ಯಾನ್, ಕಾರ್ಯದರ್ಶಿ ಕೀರ್ತನ್ ಕುಮಾರ್, ಸಂಘದ ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಸದಸ್ಯರಾದ ಮಂಜುನಾಥ ಆಚಾರ್ಯ, ಸುರೇಶ್ ಅಬ್ಬನಡ್ಕ, ಯಶವಂತ್ ಕುಲಾಲ್, ಆರತಿ ಕುಮಾರಿ ಮೊದಲಾದವರಿದ್ದರು.