ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನಂದಳಿಕೆ ಅಬ್ಬನಡ್ಕ ಭಜನಾ ಮಂಡಳಿಯವರಿಂದ ಕುಣಿತ ಭಜನಾ ಕಾರ್ಯಕ್ರಮ

ವರದಿ:  ವಾಲ್ಟರ್  ಮೊಂತೇರೊ, ಬೆಳ್ಮಣ್ಣು


ಇತಿಹಾಸ ಪ್ರಸಿದ್ಧಿ ಪಡೆದಿರುವ ಮೂಂಡ್ಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅಂಗಾರಕ ಸಂಕಷ್ಟಹರ ಚತುರ್ಥಿಯ ಅಂಗವಾಗಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿಯ ವತಿಯಿಂದ ಮಂಗಳವಾರ ಶ್ರೀ ಕ್ಷೇತ್ರದ ಆವರಣದಲ್ಲಿ ಕುಣಿತ ಭಜನಾ ಕಾರ್ಯಕ್ರಮ ಜರಗಿತು.
ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಪ್ರಧಾನ ಅರ್ಚಕರಾದ ರಾಮದಾಸ್ ಆಚಾರ್ಯ ಅವರು ಭಜನಾ ಮಂಡಳಿಯ ಸದಸ್ಯರಿಗೆ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ಮಹಾಪ್ರಸಾದ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ರವೀಂದ್ರ ಶೆಟ್ಟಿ, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ರಘುವೀರ್ ಎಂ. ಶೆಣೈ, ಪ್ರಸಾದ್ ಎಂ. ಶೆಟ್ಟಿ, ಲಕ್ಷೀ ಸೋಮನಾಥ ಪೂಜಾರಿ, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿಯ ಅಧ್ಯಕ್ಷೆ ಸುಲೋಚನಾ ಕೋಟ್ಯಾನ್, ಮುಂಡ್ಕೂರು ದೇವಸ್ಥಾನದ ಅರುಣ್ ರಾವ್, ಶಿವಪ್ರಸಾದ್ ರಾವ್, ಮನೋಹರ್ ಮೂಲ್ಯ, ಭಜನಾ ಮಂಡಳಿ ಕಾರ್ಯದರ್ಶಿ ಹರಿಣಾಕ್ಷಿ ಪೂಜಾರಿ, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ, ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಪೂರ್ವಾಧ್ಯಕ್ಷರಾದ ರಾಜೇಶ್ ಕೋಟ್ಯಾನ್, ರಘುವೀರ್ ಶೆಟ್ಟಿ, ಸತೀಶ್ ಪೂಜಾರಿ ಅಬ್ಬನಡ್ಕ, ಕಾರ್ಯದರ್ಶಿ ಕಾಸ್ರಬೈಲು ಸುರೇಶ್, ಉಪಾಧ್ಯಕ್ಷ ಸುರೇಶ್ ಅಬ್ಬನಡ್ಕ, ಭಜನಾ ಮಂಡಳಿಯ ಆರತಿ ಕುಮಾರಿ, ವೀಣಾ ಪೂಜಾರಿ, ಪದ್ಮಶ್ರೀ ಪೂಜಾರಿ, ಲಲಿತಾ ಆಚಾರ್ಯ, ಕೀರ್ತನ್ ಕುಮಾರ್ ಮೊದಲಾದವರಿದ್ದರು.