ಭಂಡಾರ್ಕಾರ್ಸ್ ಕಾಲೇಜಿನ ಎನ್.ಸಿ.ಸಿ ಆರ್ಮಿ ಕೆಡೆಟ್ಗಳು ದೆಹಲಿಯಲ್ಲಿ “ಥಲ್ ಸೈನಿಕ್ ಶಿಬಿರ”ದಲ್ಲಿ ಭಾಗವಹಿಸುವಿಕೆ

ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಎನ್.ಸಿ.ಸಿ ಆರ್ಮಿ ಕೆಡೆಟ್ ಗಳಾದ ಎಸ್.ಯು.ಒ.ರಂಜಿತ್ ಹಾಗೂ ಜೆ.ಯು.ಒ ಆನ್ಸ್ಟನ್ ಇಮ್ಯಾನ್ಯುಯಲ್ ರೆಬೆಲ್ಲೊ ಇವರುಗಳು ಇದೆ 14ನೇ ಸೆಪ್ಟೆಂಬರ್ 2022ರಿಂದ 25ನೇ ಸೆಪ್ಟೆಂಬರ್ 2022ರವರೆಗೆ ದೆಹಲಿಯಲ್ಲಿ ನಡೆಯಲಿರುವ “ಥಲ್ ಸೈನಿಕ್ ಶಿಬಿರ”ದಲ್ಲಿ ಭಾಗವಹಿಸುತ್ತಿದ್ದಾರೆ.
ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲ ಡಾ.ಎನ್.ಪಿ.ನಾರಾಯಣ ಶೆಟ್ಟಿ, ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗ ಅಭಿನಂದನೆಗಳನ್ನು ತಿಳಿಸಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇವರಿಗೆ ಕಾಲೇಜಿನ
ಎನ್ ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಅಂಜನ್ ಕುಮಾರ್ ಎಂ.ಎಲ್ ತರಬೇತಿ ನೀಡಿದ್ದರು.

ಜೆ.ಯು.ಒ ಆನ್ಸ್ಟನ್ ಇಮ್ಯಾನ್ಯುಯಲ್ ರೆಬೆಲ್ಲೊ
ಎಸ್.ಯು.ಒ.ರಂಜಿತ್