ವಯನಾಡು ಗುಡ್ಡ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 74 ಕ್ಕೆ ಏರಿಕೆ

ಚಾಲಿಯಾರ್ ನದಿಯಲ್ಲಿ ಹಲವಾರು ಮಂದಿ ನಾಪತ್ತೆಯಾಗಿದ್ದಾರೆ. ನೂರಾರು ಮಂದಿ ಘಟನೆ ಸಿಲುಕಿ ಗಾಯಗೊಂಡಿದ್ದಾರೆ. ಇದೀಗ ಸಮೀಪದ ಮದ್ರಸ ಮತ್ತು‌ಮಸೀದಿಗಳನ್ನು ಆಸ್ಪತ್ರೆಗಳಾಗಿ ಬದಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಾಹಿತಿಯಂತೆ ಇನ್ನೂ ಹಲವು ಮಂದಿ ಮಣ್ಣಿನಡಿ ಸಿಲುಕಿಕೊಂಡಿದ್ದು ಅವರನ್ನು ರಕ್ಷಿಸುವ ಕಾರ್ಯ NDRF ನೇತೃತದಲ್ಲಿ ಜಾರಿಯಲ್ಲಿದೆ‌.