ಮಾರ್ಚ್ 17ರಂದು ಬೆಳ್ಮಣ್ಣು ಜೇಸಿಐ ಘಟಕಕ್ಕೆ ಭಾರತೀಯ ಜೇಸಿಐನ ರಾಷ್ಟೀಯ ಉಪಾಧ್ಯಕ್ಷರ ಅಧಿಕೃತ ಭೇಟಿ ಸಮಾರಂಭ

ಭಾರತೀಯ ಜೇಸಿಐನ ವಲಯ 15ರಲ್ಲಿ ಹಿರಿಯ ಘಟಕಗಳಲ್ಲಿ ಒಂದಾದ ಜೇಸಿಐ ಬೆಳ್ಮಣ್ಣು ಘಟಕಕ್ಕೆ ಭಾರತೀಯ ಜೇಸಿಐನ ರಾಷ್ಟೀಯ ಉಪಾಧ್ಯಕ್ಷರಾದ ಡಾ. ಸುಶಾಂತ್ ಅವರು ಮಾರ್ಚ್ 17ರಂದು ಮಧ್ಯಾಹ್ನ 12 ಗಂಟೆಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಬೆಳ್ಮಣ್ಣು ಜಂತ್ರ ಶಿವಗಿರಿ ಬಳಿ ನವೀಕರಣಗೊಳಿಸಿದ ಪ್ರಯಾಣಿಕರ ತಂಗುದಾಣ ಶಾಶ್ವತ ಯೋಜನೆಯ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ಬೆಳ್ಮಣ್ಣು ಜೇಸಿಐ ಘಟಕದ ಅಧ್ಯಕ್ಷರಾದ ಅಬ್ಬನಡ್ಕ ಸತೀಶ್ ಪೂಜಾರಿ ಅವರು ಪತ್ರಿಕಾ ಪ್ರಕಟನೆಗೆ ತಿಳಿಸಿದ್ದಾರೆ.