ಪಟ್ಟಣದ ಪಿಎಲ್‍ಡಿ ಬ್ಯಾಂಕ್ ಸಭಾಂಗಣದಲ್ಲಿ ಬುಧವಾರ ಡಾ. ಬಾಬು ಜಗಜೀವನ್ ರಾಂ ಜಯಂತಿ ಆಚರಣೆ

ಶ್ರೀನಿವಾಸಪುರ: ಪಟ್ಟಣದ ಪಿಎಲ್‍ಡಿ ಬ್ಯಾಂಕ್ ಸಭಾಂಗಣದಲ್ಲಿ ಬುಧವಾರ ಡಾ. ಬಾಬು ಜಗಜೀವನ್ ರಾಂ ಜಯಂತಿ ಆಚರಿಸಲಾಯಿತು. ಶಾಸಕ ಕೆ.ಆರ್.ರಮೇಶ್ ಕುಮಾರ್ ಡಾ. ಬಾಬು ಜಗಜೀವನ್ ರಾಂ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಪುಷ್ಪ ನಮನ ಅರ್ಪಿಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್, ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ಮುಖಂಡರಾದ ವೆಂಕಟೇಶ್, ಎನ್.ಮುನಿಸ್ವಾಮಿ, ಕೆ.ಕೆ.ಮಂಜು, ಸೀತಾರಾಮರೆಡ್ಡಿ, ವರ್ತನಹಳ್ಳಿ ವೆಂಕಟೇಶ್, ಮುನಿರಾಜು, ಕೆ.ನಾರಾಯಣಸ್ವಾಮಿ ಇದ್ದರು.
ಮಾಲಾರ್ಪಣೆ: ಬಾಬು ಜಗಜೀವನ್ ರಾಂ ಜಯಂತಿ ಅಂಗವಾಗಿ ತಾಲ್ಲೂಕು ಕಚೇರಿ ಮುಂಭಾಗ ಅಂಬೇಡ್ಕರ್ ಉದ್ಯಾನದಲ್ಲಿನ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಶಾಸಕ ಕೆ.ಆರ್.ರಮೇಶ್ ಕುಮಾರ್ ಮಾಲಾರ್ಪಣೆ ಮಾಡಿದರು.