

ಶ್ರೀನಿವಾಸಪುರ : ಪಟ್ಟಣದ ಹೊರವಲಯದ ಹೊಗಳಗರೆ ಕ್ರಾಸ್ ಬಳಿ ಮಂಗಳವಾರ ರಾತ್ರಿ ಸುಮಾರು 8 ಗಂಟೆ ಸಮಯದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಕೇತಗಾನಹಳ್ಳಿ ಗ್ರಾಮದ ಪದ್ಮಮ್ಮ ( 48ವರ್ಷ), ರಘು ( 26 ವರ್ಷ ) ಸ್ಥಳದಲ್ಲಿ ಮೃತಪಟ್ಟಿದ್ದಾರೆ.
ಮೃತರು ಶ್ರೀನಿವಾಸಪುರ ಪಟ್ಟಣದಿಂದ ಸ್ವಗ್ರಾಮ ಕೇತಗಾನಹಳ್ಳಿ ಗ್ರಾಮಕ್ಕೆ ತೆರಳುವ ವೇಳೆ ಘಟನೆ ನೆದಿದ್ದು, ಶ್ರೀನಿವಾಸಪುರ ಪೊಲೀಸರು ಕೇಸು ದಾಖಲಿಸಿಕೊಂಡು ಅಪರಚಿತ ವಾಹನದ ಪತ್ತೆಗಾಗಿ ಸಿಸಿ ಕ್ಯಾಮರಗಳ ಪರಿಶೀಲನೆ ಮಾಡುತ್ತಿದ್ದಾರೆ .