ಎಸ್ಸಿಎಸ್ಟಿ ಶಿಕ್ಷಕರ ಸಂಘದಿಂದ ಪ್ರತಿಭಾ ಪುರಸ್ಕಾರ:ಹೊಳಲಿ ಶಿಕ್ಷಕಿ ಇಂದ್ರಮ್ಮರಿಗೆ ಗುರುರತ್ನ ಪ್ರಶಸ್ತಿ

ಕೋಲಾರ:- ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಎಸ್ಸಿಎಸ್ಟಿ ಶಿಕ್ಷಕರ ಸಂಘದಿಂದ ನಗರದ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಹೊಳಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಎಂ.ಇಂದ್ರಮ್ಮ ಸೇರಿದಂತೆ ಹಲವು ಶಿಕ್ಷಕರಿಗೆ ಗುರುರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ನಗರದ ರಂಗಮಂದಿರದಲ್ಲಿ ಎಸ್ಸಿಎಸ್ಟಿ ಶಿಕ್ಷಕರ ಸಂಘದಿಂದ ನಡೆದ ಪ್ರತಿಭಾ ಪುರಸ್ಕಾರ ಹಾಗೂ ಗುರುರತ್ನ ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಚನ್ನಬಸಪ್ಪ, ಸಂಘದ ರಾಜ್ಯ ಅಧ್ಯಕ್ಷ ಟಿ.ಸೊಣ್ಣಪ್ಪ, ಪ್ರಧಾನ ಕಾರ್ಯದರ್ಶಿ ಕೆ.ಟಿ.ನಾಗರಾಜ್, ಜಿಲ್ಲಾ ಅಧ್ಯಕ್ಷ ಎನ್.ಮುನಿಯಪ್ಪ, ತಾಲ್ಲೂಕು ಅಧ್ಯಕ್ಷ ವೈ.ವೆಂಕಟೇಶ್, ಕಾರ್ಯದರ್ಶಿ ಎನ್.ವಿ.ರಮೇಶ್, ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಚೌಡಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಪ್ಪಿಗೌಡ, ಪ್ರಧಾನ ಕಾರ್ಯದರ್ಶಿ ಎಂ.ನಾಗರಾಜ್, ಅಂತರ್ಜಲ ಇಲಾಖೆ ತಿಪ್ಪೇಸ್ವಾಮಿ, ಮಹಿಳಾ ಮಕ್ಕಳ ಇಲಾಖೆ ಮುದ್ದಣ್ಣ,ವಿಷಯ ಪರಿವೀಕ್ಷಕ ವೆಂಕಟೇಶಪ್ಪ ಮತ್ತಿತರರಿದ್ದರು.