ಜನನುಡಿ ಡಾಟ್ ಕಾಮ್ ಸುದ್ದಿ ಸಂಸ್ಥೆಯ “ಮುದ್ದು ಯೇಸು2022-23” ರರ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

ಕುಂದಾಪುರ,ಜೂನ್ 4 : ಜನನುಡಿ ಡಾಟ್ ಕಾಮ್ ಸುದ್ದಿ ಸಂಸ್ಥೆಯಿಂದ ಏರ್ಪಡಿಸಿದ ಮುದ್ದು ಯೇಸು ಫೋಟೊ ಸ್ಫರ್ಧೆಯ ವಿಜೇತರಿಗೆ ಕೋಟೆಶ್ವರ ಕಟ್ಕರೆಯ ಬಾಲ ಯೇಸುವಿನ ಆಶ್ರಮದಲ್ಲಿ ಮತ್ತು ಕುಂದಾಪುರ ಹೋಲಿ ರೋಜರಿ ಚರ್ಚಿನಲ್ಲಿ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು. ಗುರುವಾರದಂದು ಬಾಲ ಯೇಸುವಿನ ನೊವೆನಾ ದಿವಸ ವಿಜೇತರಿಗೆ ಶುಕ್ರವಾರದಂದು ಕುಂದಾಪುರ ಹೋಲಿ ರೋಜರಿ ಚರ್ಚಿನಲ್ಲಿ ಬಹುಮಾನಗಳನ್ನು ವಿತರಿಸಲಾಯಿತು.

ಕಟ್ಕೆರೆ ಬಾಲಯೇಸುವಿನ ಆಶ್ರಮದಲ್ಲಿ,ಆಶ್ರಮದ ನೂತನ ಮುಖ್ಯಸ್ಥರಾದ ವಂ|ಪ್ರವೀಣ್ ಪಿಂಟೊ ಮತ್ತು ಧರ್ಮಗುರು ವಂ|ಜೋ ತಾವ್ರೊ ವಿಜೇತ ಮಕ್ಕಳಿಗೆ ಬಹುಮಾನವನ್ನು ವಿತರಿಸಿದರು. ಶುಕ್ರವಾರ ಸಂಜೆ ರೋಜರಿ ಚರ್ಚಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ ವಿಜೇತರಿಗೆ ಬಹುಮಾನವನ್ನು ವಿತರಿಸಿದರು. ವಿಜೇತ ಮಕ್ಕಳಿಗೆ ಪ್ರಶಸ್ತಿ ಪತ್ರ ಮತ್ತು ನಗದು ಹಣವನ್ನು ವಿತರಿಸಿ ಶುಭ ಕೋರಿದರು. ಈ ಸಂದರ್ಭದಲ್ಲಿ ಕುಂದಾಪುರದ ಸಹಾಯಕ ಧರ್ಮಗುರು ವಂ|ಅಶ್ವಿನ್ ಆರಾನ್ನ, ಪೋಷಕಿಯರಲ್ಲಿ ಒಬ್ಬರಾದ ಶಾಂತಿ ಪಿಂಟೊ ಮತ್ತು ಇತರು ಉಪಸ್ಥಿತರಿದ್ದರು.

  ಜನನುಡಿ ಸುದ್ದಿ ಸಂಸ್ಥೆಯ ಸಂಪಾದಕರಾದ ಬರ್ನಾಡ್ ಡಿಕೋಸ್ತಾ ಸ್ವಾಗತಿಸಿಧನ್ಯವಾದಗಳನ್ನು ಅರ್ಪಿಸಿದರು. ಸ್ಫರ್ಧೆಯ ಸಂಯೋಜಕಿ ವಿನಯಾ ಡಿಕೋಸ್ತಾ ಕಾರ್ಯಕ್ರಮ ನಿರೂಪಿಸಿದರು.

ಮುದ್ದು ಯೇಸು ಸ್ಫರ್ಧೆಯಲ್ಲಿ ಒಂದು ವರ್ಷದ ಒಳಗಿನ ಮಕ್ಕಳ ವಿಭಾಗದಲ್ಲಿ ಬಸ್ರೂರಿನ ವೆನೋರಾ ಡಿಸೋಜಾ ಪ್ರಥಮ ಸ್ಥಾನ ಪಡೆದರೆ,ದ್ವಿತೀಯ ಸ್ಥಾನವನ್ನು ಬೆಂಗಳೂರಿನ ಇಯನ್ ಜಿತ್, ಡೆದರು, ತ್ರತೀಯ ಸ್ಥಾನವನ್ನು ಕುಂದಾಪುರದ ಎಡೆನ್ ಡಿಆಲ್ಮೇಡಾ ಪಡೆದುಕೊಂಡನು. ಕೋಟದ ಡೀಯೊರ್ ಸಾಶಾ ಡಾಯಾಸ್, ಕೋಟೆಶ್ವರದ ಅಮೋಸ್ ಥೋಮಸ್ ಡಿಮೆಲ್ಲೊ ಮತ್ತು  ಪೇತ್ರಿಯ ಈವಾ ಎಂಜೆಲ್ ಡಿಸೋಜಾ ಇವರು ಸಮಾಧಾನಕರ ಬಹುಮಾನಗಳನ್ನು ಪಡೆದುಕೊಂಡರು.

2 ರಿಂದ 5 ವರ್ಷದ ಮಕ್ಕಳ ವಿಭಾಗದಲ್ಲಿ ಕುಂದಾಪುರದ ಸಾನಿಯಾ ಡಿಮೆಲ್ಲೊ ಪ್ರಥಮ ಸ್ಥಾನ ಪಡೆದಳು. ದ್ವಿತೀಯ ಸ್ಥಾನವನ್ನು ಕುಂದಾಪುರದ ಅಲೈನಾ ಎಬ್ರಿಲ್ ಫೆರ್ನಾಂಡಿಸ್ ಪಡೆದುಕೊಂಡನು, ತ್ರತೀಯ ಸ್ಥಾನವನ್ನು ಕುಂದಾಪುರದ ಮಹಿಮಾ ವಿಯಾನ್ನಾ ಬರೆಟ್ಟೊ ಪಡೆದುಕೊಂಡಳು. ಗಂಗೊಳ್ಳಿಯ ಒನೀಲ್ ಜೂಡ್ ರೆಬೆಲ್ಲೊ, ಮೂಡುಬಿದ್ರೆ ಕಲ್ಲಾ ಬೆಟ್ಟುವಿನ ಆನ್ (Ann) ಕಾರ್ಡೊಜಾ, ಮತ್ತು ಹಂಗಾರಕಟ್ಟೆಯ ಸೆಲ್ವಿಟಾ ಡಿಆಲ್ಮೇಡಾ ಇವರು ಸಮಾಧಾನಕರ ಬಹುಮಾನಗಳನ್ನು ಪಡೆದುಕೊಂಡರು.

ಈ ಸಾಲಿನ ಸ್ಪರ್ಧೆಯು ಮಾಧ್ಯಮದ ಮೂಲಕ ಸಾರ್ವಜನಿಕರು ಮೆಚ್ಚುಗೆ ಪಡೆದ ಮಕ್ಕಳನ್ನು ಜನನುಡಿ ಮುದ್ದು ಯೇಸು ಸ್ಫರ್ಧೆಯಲ್ಲಿ ವಿಜೇತರನ್ನಾಗಿ ಆರಿಸಲಾಗಿದೆ. ಸ್ಫರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಜನನುಡಿ ಸುದ್ದಿ ಸಂಸ್ಥೆಯಿಂದ ಧನ್ಯವಾದಗಳು, ವಿಜೇತರಾದ ಮುದ್ದು ಮಕ್ಕಳಿಗೆ ಮತ್ತು ಅವರ ಪೋಷಕರಿಗೆ ಜನನುಡಿ ಸುದ್ದಿ ಸಂಸ್ಥೆಯಿಂದ ಅಭಿನಂದನೆಗಳು.ಹಾಗೇ ಈ ಸ್ಫರ್ಧೆಗೆ ಪೋಷಕರಾದ ಮಂಜೀತ್ ನಾಗರಾಜ್, ಸಮಾಜ ಸೇವಕರು ಉದ್ಯಮಿ, ಕಿರಣ್-ಜೆಸ್ವಿನಾ ಜಿತ್ ಎನ್ರೆಸ್ಪೊಟೆಕ್ನೊಲೊಜೀಸ್ ಬೆಂಗಳೂರು, ರೋಜರಿ ಕ್ರೆಡಿಟ್ ಕೋ.ಆಪ್. ಸೊಸೈಟಿ ಲಿಮಿಟ್. ಡಾ.ರೊಬರ್ಟ್ ರೆಬೆಲ್ಲೊ ಐವನ್ ಆಲ್ಮೇಡಾ, ವಸಂತ ಬೇಕರಿ,ಕುಂದಾಪುರ, ಶ್ರೀಮತಿ ಶಾಂತಿ ಪಿಂಟೊ, ಮತ್ತು ಕುಟುಂಬ ಕುಂದಾಪುರ, ಸೀತಾರಾಮ್ ಶೆಟ್ಟಿ, ಕುಂದಾಪುರ. ಶ್ರೀಮತಿ ವನೀತಾ ಬರೆಟ್ಟೊ/ಶ್ರೀ ವಿನ್ಸೆಂಟ್ ಬರೆಟ್ಟೊ ಮತ್ತು ಅಂಟೋನಿ ಲುವಿಸ್ ಮಣಿಪಾಲ  ಇವರಿಗೆ  ತುಂಬು ಹ್ರದಯದಿಂದ ಸುದ್ದಿ ಸಂಸ್ಥೆ ಕ್ರತ್ಞಜತೆಗಳನ್ನು  ಸಲ್ಲಿಸಿಸುತ್ತಿದೆ.