ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಕರ್ಣಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ – ಲಕ್ಷ ಬೆಲೆಯ ಕಂಪ್ಯೂಟರ್ ಲ್ಯಾಬಿಗೆ ಪೀಠೋಪಕರಣ ಕೊಡುಗೆ

ಕುಂದಾಪುರ; ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಘಟಕವು ಈ ದಿನ ಕರ್ಣಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ – ನೆಂಪು ಇಲ್ಲಿಗೆ ಒಂದು ಲಕ್ಷ ಬೆಲೆಯ ಕಂಪ್ಯೂಟರ್ ಲ್ಯಾಬ್ ನ ಪೀಠೋಪಕರಣ ವನ್ನು ಒದಗಿಸಿದರು. ರೆಡ್ ಕ್ರಾಸ್ ಸಭಾಪತಿ ಎಸ್ ಜಯಕರ ಶೆಟ್ಟಿ ಇದನ್ನು ಉದ್ಘಾಟಿಸಿದರು. ಶಾಲೆಯ ಎಚ್.ಎಮ್. ಸದಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ದಲ್ಲಿ ಪ್ರಾಂಶುಪಾಲರಾದ ರಾಜೀವ ನಾಯ್ಕ, ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಗಣೇಶ್ ಆಚಾರ್ಯ, ಅಬ್ದುಲ್ ಬಶೀರ್ ಹಾಗೂ ಈ ದೇಣಿಗೆ ನೀಡಿದ ರೆಡ್ ಕ್ರಾಸ್ ಸದಸ್ಯರಾದ ಶ್ರೀಮತಿ ಪ್ರತಿಮ ದಿನಕರ ಶೆಟ್ಟಿ (W/ O Dr. Dinakar Shetty) ಮತ್ತು ಅವರ ಪುತ್ರಿ ಡಾ. ನಿಕಿತ ಶೆಟ್ಟಿ ಉಪಸ್ಥಿತರಿದ್ದರು. ಸುಧಾಕರ ಶೆಟ್ಟಿ ಸ್ವಾಗತಿಸಿದರು. ಕರುಣಾಕರ ಶೆಟ್ಟಿ ಧನ್ಯವಾದ ಸಮರ್ಪಿಸಿದರು. ವಸಂತರಾಜ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.