ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಗಣಾಜ್ಯೋತ್ಸವ ಆಚರಣೆ.

JANANUDI.COM NETWORK

ಕುಂದಾಪುರ ಜನವರಿ 26:ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಗಣಾಜ್ಯೋತ್ಸವನ್ನು ದ್ವಜರೋಹಣದ ಮೂಲಕ ಆಚರಿಸಲಾಯಿತು
ದ್ವಜರೋಹಣವನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿಯವರು ನೆರವೇರಿಸಿದರು
ಈ ಸಂದರ್ಭದಲ್ಲಿ ಪಿ.ಎಲ್.ಡಿ ಬ್ಯಾಂಕಿನ ಅಧ್ಯಕ್ಷರಾದ ಮಲ್ಯಾಡಿ ಶಿವರಾಮ ಶೆಟ್ಟಿಯವರು ಮಾತನಾಡಿ ಗಣರಾಜ್ಯೋತ್ಸವ ದಿನ ನಮ್ಮ ದೇಶದ ವಿವಿಧ ಸಂಸ್ಕೃತಿಯ ಮಹತ್ವವನ್ನು ಸಂವಿಧಾನಾತ್ಮಕವಾಗಿ ಒಪ್ಪಿಕೊಂಡ ದಿನ ಆದರೆ ಇಂದು ಕೇಂದ್ರ ಸರಕಾರವಿದಕ್ಕೆ ಕೊಡಲಿ ಏಟನ್ನು ನೀಡಿದೆ ಎಂದರು.
ಈ ಸಂದರ್ಭದಲ್ಲಿ ಕೆ.ಎಫ್.ಡಿ.ಸಿ ಯ ಮಾಜಿ ಅಧ್ಯಕ್ಷರಾದ ಬಿ.ಹಿರಿಯಣ್ಣ, ಕಿಸಾನ್ ಘಟಕದ ಅಧ್ಯಕ್ಷರಾದ ಭಾಸ್ಕರ ಶೆಟ್ಟಿ, ಪುರಸಭೆ ಸದಸ್ಯೆ ಪ್ರಭಾವತಿ ಶೆಟ್ಟಿ ಮಾತನಾಡಿದರು ಸಭೆಯ ಅಧ್ಯಕ್ಷತೆಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿ ನೆರವವೇರಿಸಿದರು.
ಸಭೆಯಲ್ಲಿ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ದೇವಕಿ ಸಣ್ಣಯ್ಯ ,ಮಾಜಿ ಪುರಸಭಾ ಅಧ್ಯಕ್ಷ ಹಾರೂನ್ ಸಾಹೇಬ್ ಪುರಸಭಾ ಸದಸ್ಯ ಅಷ್ಪಕ್, ಪಂಚಾಯತ್ ಸದಸ್ಯರಾದ ಜಾನಕಿ ಬಿಲ್ಲವ, ಮಾಜಿ ಪಂಚಾಯತ್ ಅಧ್ಯಕ್ಷರಾದ ಗಂಗಾಧರ್ ಶೆಟ್ಟಿ ,ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಆಶಾ ಕರ್ವಾಲೊ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಅಬ್ದುಲ್ ಕೋಡಿ, ಬ್ಲಾಕ್ ಕಾಂಗ್ರೆಸ್ ಉಪಸಮಿತಿಗಳ ಅಧ್ಯಕ್ಷರಾದ ಮುನಾಫ್ ಕೋಡಿ, ಅಶ್ವತ್ಥ್ ಕುಮಾರ್, ಕೆ.ಶಿವಕುಮಾರ್, ಯುವ ಇಂಟಕ್ ಅಧ್ಯಕ್ಷರಾದ ಶಶಿರಾಜ್ ಪೂಜಾರಿ, ಜಿಲ್ಲಾ ಯುವ ಪ್ರಧಾನ ಕಾರ್ಯದರ್ಶಿ ಅಭಿಜಿತ್ ಪೂಜಾರಿ ಸದಸ್ಯರಾದ ಎಡೊಲ್ಫ ಡಿ ಕೊಸ್ಟ , ಸಚಿನ್ ಕುಮಾರ್, ಕೆ.ಸುರೇಶ್, ಜೋಸೆಫ್ ರೆಬೆಲ್ಲೊ , ಸಂಗೀತ ಇನ್ನಿತರರು ಉಪಸ್ಥಿತರಿದ್ದರು.
ಯುವ ಮುಖಂಡರಾದ ಸುನಿಲ್ ಪೂಜಾರಿ ಸ್ವಾಗತಿಸಿ ಇಂಟಕ್ ಅಧ್ಯಕ್ಷರಾದ ಚಂದ್ರ ಅಮಿನ್ ವಂದಿಸಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕ್ರಾಸ್ಟೊ ನಿರೂಪಿಸಿದರು.