

ಶ್ರೀನಿವಾಸಪುರ : ತಾಲ್ಲೂಕಿನ ತೆರ್ನಹಳ್ಳಿ ಗ್ರಾಮದ ನಿವೃತ್ತ ಮುಖ್ಯ ಶಿಕ್ಷಕ ಟಿ.ಎ.ನಾರಾಯಣಸ್ವಾಮಿ , ಯಶೋದಮ್ಮ ದಂಪತಿಯ ಪುತ್ರನಾದ ಟಿ.ಎನ್.ಜಯಶಂಕರ್ ರವರಿಗೆ ಬೆಂಗಳೂರು ವಿಶ್ವವಿದ್ಯಾಲಯದ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜನೀಯರಿಂಗ್ ನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಾಕ ಡಾ.ಪಿ.ಎಸ್.ನಾಗರಾಜ್ ರವರ ಮಾರ್ಗದರ್ಶನದಲ್ಲಿ ಮಂಡಿಸಿದ “ ಎಕ್ಸಪರಿಮೆಂಟಲ್ ಇನ್ವೆಸ್ಟಿಗೇಷನ್ಸ್ ಆನ್ ಫ್ಯಬರ್ ರೀಇನ್ಫೋಸ್ರ್ಟ್ ಜಿಯೋ ಪಾಲಿಮಾರ್ ಕಾಂಕ್ರಿಟ್ ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್ಡಿ ಪದವಿ ಪ್ರಧಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.