

ರೋಟರಿ ಕ್ಲಬ್ ಕುಂದಾಪುರ ದಕ್ಷಿಣದ ವತಿಯಿಂದ ರೋ. ರಮಾನಂದ ಕಾರಂತರ ಸಂಬಂಧಿಕರು ಹಾಗೂ ಸವಿತಾ ಫೌಂಡೇಶನ್, “ಆಯಿ” ಹಂಗಳೂರು ಇವರ ದೇಣಿಗೆಯಿಂದ ಬೆಚ್ಚನೆಯ ಹಾಗೂ ತಣ್ಣನೆಯ ಶುದ್ಧ ಕುಡಿಯುವ ನೀರಿನ ಘಟಕವನ್ನು ಬಿ. ಬಿ. ಹೆಗ್ಡೆ ಕಾಲೇಜಿಗೆ ಹಸ್ತಾಂತರಿಸಲಾಯಿತು.
ಕಾರ್ಯಕ್ರಮದಲ್ಲಿ ರೋಟರಿ ದಕ್ಷಿಣದ ಅಧ್ಯಕ್ಷ ರೋ. ಸತ್ಯನಾರಾಯಣ ಪುರಾಣಿಕ, ಮಾಜಿ ಅಧ್ಯಕ್ಷ ರೋ. ಯು.ಎಸ್.ಶೆಣೈ, ರೋ.ರಮಾನಂದ ಕಾರಂತ, ಪ್ರಾಂಶುಪಾಲ ಪ್ರೊ. ಕೆ. ಉಮೇಶ ಶೆಟ್ಟಿ ಹಾಗೂ ಉಪ ಪ್ರಾಂಶುಪಾಲ ಕೋವಾಡಿ ಚೇತನ್ ಶೆಟ್ಟಿ ಉಪಸ್ಥಿತರಿದ್ದರು.