ಕುಂದಾಪುರದ ಶ್ರೇಯಶ್ರೀಗೆ ಸರಸ್ವತಿ ರಾಜ್ಯ ಪ್ರಶಸ್ತಿ ಪುರಸ್ಕಾರ


ಕುಂದಾಪುರ: 2022 23ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 600ಕ್ಕೂ ಹೆಚ್ಚು ಅಂಕ ಪಡೆದ ಕುಂದಾಪುರ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶ್ರೇಯಶ್ರೀ ಇವರಿಗೆ ದಾವಣಗೆರೆಯ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಕಲಾ ಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಸಾಲಿಗ್ರಾಮ ಗಣೇಶ್ ಶಣೈ ಸರಸ್ವತಿ ಪುರಸ್ಕಾರ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಇವರು ಅಂಕದಕಟ್ಟೆ ಉದಯ ಮತ್ತು ಉಮಾ ದಂಪತಿಗಳ ಪುತ್ರಿಯಾಗಿದ್ದಾಳೆ