ರಾಜ್ಯದಲ್ಲಿ ನಾಳೆಯಿಂದ ಶಾಲಾ, ಪ.ಪೂ.ಕಾಲೇಜುಗಳು ಆರಂಭ ಆದರೆ ದ.ಕ. ಉಡುಪಿ ಕೊಡಗು ಜಿಲ್ಲೆಗಳಲ್ಲಿ ಶಾಲಾರಂಭ ಇಲ್ಲ

JANANUDI.COM NETWORK

ಬೆಂಗಳೂರು:ಅ.22 “ಆಗಸ್ಟ್‌ 23ರಿಂದ ರಾಜ್ಯದಲ್ಲಿ ಶಾಲಾರಂಭ ಆಗಲಿದ್ದರೂ, ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮಾತ್ರ ತರಗತಿ ಆರಂಭವಾಗುವುದಿಲ್ಲ. ಕೊರೊನಾ ಪಾಸಿಟಿವಿಟಿ ದರ ಹೆಚ್ಚಿರುವ ಕಾರಣ ಮುಂದಿನ ಸೂಚನೆ ಬರುವವರೆಗೂ ಶಾಲಾರಂಭ ಇಲ್ಲ” ಎಂದು ರಾಜ್ಯ ಸರ್ಕಾರ ತಿಳಿಸಿದೆ. ಕೊರೊನಾ ವಾರ್‌ ರೂಂ ಬುಲೆಟಿನ್‌ ಪ್ರಕಾರ, ದಕ್ಷಿಣ ಕನ್ನಡ (ಶೇ. 3.2), ಉಡುಪಿ (ಶೇ. 2.8), ಕೊಡಗು (ಶೇ. 2.3) ಜಿಲ್ಲೆಗಳು ಮಾತ್ರ ಶೇ. 2ಕ್ಕಿಂತ ಅಧಿಕ ಪಾಸಿಟಿವಿಟಿ ದರ ಹೊಂದಿವೆ.

ಈಗಾಗಲೇ 16,850 ಪ್ರೌಢ ಶಾಲೆಗಳು ಹಾಗೂ 5,492 ಪದವಿ ಪೂರ್ವ ಕಾಲೇಜುಗಳಲ್ಲಿ ಶಾಲೆ ಪುನಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳ್ಳಗ್ಗೆ 10 ರಿಂದ 1:30 ರವರೆಗೆ ಮಾತ್ರ ತರಗತಿಗಳು ನಡೆಯಲಿವೆ. ಶಾಲಾರಂಭಕ್ಕೆ ಈಗಾಗಲೇ ಶಿಕ್ಷಣ ಇಲಾಖೆ ಗೈಡ್​ಲೈನ್ಸ್ ಬಿಡುಗಡೆ ಮಾಡಿದೆ.

ಶಾಲೆ ಆರಂಭವಾದ್ರೆ ಏನಿರುತ್ತೆ ಗೈಡ್​ಲೈನ್ಸ್;

ಶಾಲೆಯಲ್ಲಿ ಎರಡಕ್ಕಿಂತ ಹೆಚ್ಚು ವಿದ್ಯಾರ್ಥಿಗಳಲ್ಲಿ ಸೋಂಕು ಕಂಡು ಬಂದರೆ ಒಂದು ವಾರ ಶಾಲೆ ಸೀಲ್​ಡೌನ್ ಆಗಲಿದೆ

ಶೇಕಡಾ 2 ಕ್ಕಿಂತ ಹೆಚ್ಚು ಪಾಸಿಟಿವಿಟಿ ರೇಟ್ ಇರುವ ಜಿಲ್ಲೆಗಳಲ್ಲಿ ಶಾಲೆ ನಾಳೆ ಆರಂಭ ಆಗುವುದಿಲ್ಲ. ಶಾಲೆ ಬಂದ್ ಆಗಿರಲಿದೆ

ಕೊರೊನಾ ಲಕ್ಷಣ ಕಂಡು ಬರುವ ಮಗುವಿಗೆ ಶಾಲೆಯ ಪ್ರವೇಶ ಇರುವುದಿಲ್ಲ

ಶಾಲೆ, ಕಾಲೇಜು ಆವರಣದಲ್ಲಿ ಸಮಾಜಿಕ ಅಂತರ ಪಾಲಿಸುವುದು ಕಡ್ಡಾಯ

ಶಿಕ್ಷಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಂದ ಮಾಸ್ಕ್ ಪಾಲನೆ ಕಡ್ಡಾಯ

ಶಿಕ್ಷಕ ಹಾಗೂ ಶಾಲಾ ಸಿಬ್ಬಂದಿಗೆ ಕಡ್ಡಾಯ ವ್ಯಾಕ್ಸಿನ್ ಆಗಿರಬೇಕು

ವಿದ್ಯಾರ್ಥಿಗಳು ಪೋಷಕರಿಂದ ಒಪ್ಪಿಗೆ ಪತ್ರ ತರಬೇಕು

ಶಾಲೆ-ಕಾಲೇಜಿಗೆ ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯ ಇಲ್ಲ

ಆನ್​ಲೈನ್ ಹಾಗೂ ಆಫ್​ಲೈನ್ ಎರಡಕ್ಕೂ ವಿದ್ಯಾರ್ಥಿಗಳಿಗೆ ಅವಕಾಶ ನೀಡುವ ಸಾಧ್ಯತೆ ಇದೆ

ಕೊಠಡಿಯಲ್ಲಿ 20 ವಿದ್ಯಾರ್ಥಿಗಳಿಗೆ ಮಾತ್ರ ಕಲಿಕೆಗೆ ಅವಕಾಶ ನೀಡಲಾಗಿದೆ

ಶಾಲೆಯ ಇಡೀ ಆವರಣ ಸ್ಯಾನಿಟೈಸ್ ಮಾಡಬೇಕು

ಕುಡಿಯುವ ನೀರಿನ ಸೌಲ್ಯಭ್ಯ ನೀಡಬೇಕು ಹಾಗೂ ಆವರಣ ಸ್ವಚ್ಛಗೊಳಿಸಬೇಕು

ಶಾಲೆಯ ಶೌಚಾಲಯವನ್ನು ಶುಚಿಗೊಳಿಸಿ ವಿದ್ಯಾರ್ಥಿಗಳಿಗೆ ಅನಕೂಲ ಮಾಡಬೇಕು

ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಸಾಮಾಜಿಕ ಅಂತರ ಕಾಪಾಡುವುದರ ಜೊತೆ ಆಗಾಗ ಕೈ ತೊಳೆಯಬೇಕು

ಮನೆಯಿಂದಲೇ ಊಟದ ಡಬ್ಬಿ ಹಾಗೂ ಕಾಯಿಸಿ ಆರಿಸಿದ ನೀರನ್ನು ತರಬೇಕು

ಬಿಸಿಯಾದ ಆಹಾರ ಪದಾರ್ಥ ಸೇವಿಸಬೇಕು

ಯಾವುದೇ ಪೆನ್ನು, ನೋಟ್ ಬುಕ್, ನೀರಿನ ಬಾಟಲ್ ಹಂಚಿಕೊಳ್ಳಬಾರದು

ವಿದ್ಯಾರ್ಥಿಗಳು ಸಾಮಾಜಿಕ ಅಂತರದೊಂದಿಗೆ ಶಾಲೆ ಪ್ರವೇಶ ಮಾಡಬೇಕು

ವಿದ್ಯಾರ್ಥಿಗಳು ಬೇಕಾದ ತಿಂಡಿ ಆಹಾರವನ್ನು ಮನೆಯಿಂದಲೇ ತರಬೇಕು

ಶಾಲಾ ಪ್ರವೇಶಕ್ಕೆ ಥರ್ಮಲ್ ಸ್ಕ್ಯಾನಿಂಗ್ ಮಾಡಬೇಕು

ಶಾಲಾ ಪ್ರವೇಶಕ್ಕೆ ಥರ್ಮಲ್ ಸ್ಕ್ಯಾನಿಂಗ್ ಮಾಡಬೇಕು