ಚಿಪ್ಪು ಉದ್ಯಮಿ ವೆಂಕಟೇಶ್ ಸಾರಂಗ ನಿಧನ.

ವರದಿ : ಮಝರ್, ಕುಂದಾಪುರ

ಕುಂದಾಪುರ : ಸ್ಥಳೀಯ ಖ್ಯಾತ ಚಿಪ್ಪು ಉದ್ಯಮಿ ಕುಂದಾಪುರ ಖಾರ್ವಿ ಕೇರಿ ನಿವಾಸಿ ವೆಂಕಟೇಶ್ ಸಾರಂಗ(74) ಅವರು ಅಲ್ಪ ಕಾಲದ ಅಸೌಖ್ಯದಿಂದ ಇಂದು( ದಿ 15.10 .2021) ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನದ ಗಣೇಶೋತ್ಸವ ಸಮಿತಿಯ ಸ್ಥಾಪಕ ಅಧ್ಯಕ್ಷರಾಗಿದ್ದ ಇವರು,ದೇವಸ್ಥಾನ ಸಮಿತಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಇವರು ಪತ್ನಿ,ಒಂದು ಗಂಡು ಎರಡು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ