ಹೊಸಪೇಟೆ ನ್ಯಾಯಾಲಯದ ಆವರಣದಲ್ಲಿ ನಡೆದ ವಕೀಲ ತಾರಹಳ್ಳಿ ವೆಂಕಟೇಶ್ ಕೊಲೆ ಸಂಬಂಧಿಸಿ ಎಲ್ಲ ಪೊಲೀಸರು ಆರೋಪಿಗಳನ್ನೂ ಬಂಧಿಸಲು ವಕೀಲರ ಸಂಘದ ಅಧ್ಯಕ್ಷ ಕೆ.ಶಿವಪ್ಪ ಆಗ್ರಹ.

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಹೊಸಪೇಟೆ ನ್ಯಾಯಾಲಯದ ಆವರಣದಲ್ಲಿ ಈಚೆಗೆ ನಡೆದ ವಕೀಲ ತಾರಹಳ್ಳಿ ವೆಂಕಟೇಶ್ ಅವರ ಕೊಲೆಗೆ ಸಂಬಂಧಿಸಿದಂತೆ, ಪೊಲೀಸರು ಎಲ್ಲ ಆರೋಪಿಗಳನ್ನೂ ಬಂಧಿಸಬೇಕು ಎಂದು ಸ್ಥಳೀಯ ವಕೀಲರ ಸಂಘದ ಅಧ್ಯಕ್ಷ ಕೆ.ಶಿವಪ್ಪ ಆಗ್ರಹಿಸಿದರು.
ಪಟ್ಟಣದ ನ್ಯಾಯಾಲಯದ ವಕೀಲರ ಕೊಠಡಿಯಲ್ಲಿ ಸೋಮವಾರ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಕೊಲೆಯಾದ ವಕೀಲರ ಕುಟುಂಬಕ್ಕೆ ಸರ್ಕಾರ ರೂ.25 ಲಕ್ಷ ಪರಿಹಾರ ನೀಡಬೇಕು. ವಕೀಲರ ಪರಿಷತ್ತಿನಿಂದಲೂ ಮೃತ ವಕೀಲರ ಕುಟುಂಬಕ್ಕೆ ಆರ್ಥಿಕ ನೆರವು ನೀಡಬೇಕು. ಸರ್ಕಾರ ವಕೀಲರ ರಕ್ಷಣಾ ಕಾಯ್ದೆಯನ್ನು ಶೀಘ್ರವಾಗಿ ಜಾರಿಗೆ ತರಬೇಕು ಎಂದು ಮನವಿ ಮಾಡಿದರು.
ವಕೀಲರ ಸಂಘದ ಮಾಜಿ ಅಧ್ಯಕ್ಷ ಟಿ.ವೆಂಕಟೇಶ್, ಕಾರ್ಯದರ್ಶಿ ಕೆ.ರೂಪವತಿ, ಉಪಾಧ್ಯಕ್ಷ ಆರ್.ಗಂಗಿರೆಡ್ಡಿ, ಖಜಾಂಚಿ ಟಿ.ವಿ.ನಾರಾಯಣಸ್ವಾಮಿ, ವಕೀಲ ಅರ್ಜುನ್ ಇದ್ದರು.