ಶ್ರೀನಿವಾಸಪುರ – ಚಿಂತಾಮಣಿಯಲ್ಲಿ ರಾಜ್ಯ ಸಾರಿಗೆ ಮೋರಿಗೆ ಡಿಕ್ಕಿ ಬಸ್ಸು ಜಖಂ

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಶ್ರೀನಿವಾಸಪುರ – ಚಿಂತಾಮಣಿ ರಸ್ತೆಯ ಪಾತಪಲ್ಲಿ ಗ್ರಾಮದ ಸಮೀಪ ಮಂಗಳವಾರ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ಸೊಂದು ರಸ್ತೆ ಬದಿಯಲ್ಲಿನ ಮೋರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬಸ್ಸಿನ ಒಂದು ಕಡೆಯ ಚಕ್ರಗಳು ಕಳಚಿಬಿದು, ಬಸ್ಸು ಜಖಂಗೊಂಡಿದೆ.
ಬಸ್ ಚಾಲಕ, ಎದುರಿನಿಂದ ವೇಗವಾಗಿ ಬರುತ್ತಿದ್ದ ಬೈಕ್ ಸವಾರನನ್ನು ಅಪಘಾತದಿಂದ ಪಾರುಮಾಡಲು ಪ್ರಯತ್ನಿಸಿದಾಗ ಈ ಘಟನೆ ನಡೆಯಿತಿ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಡಿಪೋದ ವ್ಯವಸ್ಥಾಪಕ ಪ್ರಶಾಂತ್ ಕುಮಾರ್. ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ವಿಠಲ್ ತಳವಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು
.