ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನಲ್ಲಿ ಶುಭಲಕ್ಷ್ಮೀ ಆರ್. ನಾಯಕ್ ಅವರ ಕೃತಿ ಲೋಕಾರ್ಪಣೆ

ವರದಿ:  ವಾಲ್ಟರ್  ಮೊಂತೇರೊ, ಬೆಳ್ಮಣ್ಣು


ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ನೇತೃತ್ವದಲ್ಲಿ ಶುಭಲಕ್ಷ್ಮೀ ಆರ್. ನಾಯಕ್ ಅವರ “ಬೆಸುಗೆ ಇದ್ದರೆ ವಸುಧೆ” ಕವನ ಸಂಕಲನ ಕೃತಿ ಲೋಕಾರ್ಪಣೆ ಸಮಾರಂಭ ಸೋಮವಾರ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ರಂಗಮಂದಿರದಲ್ಲಿ ಜರಗಿತು.
ಉಡುಪಿ ಜಿಲ್ಲೆ ಕಸಾಪ ನಿಕಟ ಪೂರ್ವ ಜಿಲ್ಲಾಧ್ಯಕ್ಷರು ಹಾಗೂ ಸಾಹಿತಿಗಳಾದ ನೀಲಾವರ ಸುರೇಂದ್ರ ಅಡಿಗ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೆಳ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಹಾಗೂ ಖ್ಯಾತ ಸಾಹಿತಿಗಳಾದ ಡಾ. ಬಿ. ಜನಾರ್ದನ ಭಟ್ ಕೃತಿ ಲೋಕಾರ್ಪಣೆ ಮಾಡಿದರು. ಲಯನ್ಸ್ ಜಿಲ್ಲಾ ನಿಕಟಪೂರ್ವ ಜಿಲ್ಲಾ ಗವರ್ನರ್ ಎನ್. ಎಂ. ಹೆಗ್ಡೆ, ಕಾರ್ಕಳ ತಾಲೂಕು ಕಸಾಪ ನಿಕಟ ಪೂರ್ವಾಧ್ಯಕ್ಷರಾದ ಕೊಂಡಳ್ಳಿ ಪ್ರಭಾಕರ ಶೆಟ್ಟಿ, ಮೀನಕಳಿಯ ಸರಕಾರಿ ಪ್ರೌಢಶಾಲೆಯ ಶಿಕ್ಷಕರಾದ ನಿರಂಜನ್ ವಿ. ನಾಯಕ್ ಅವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ವೇದಿಕೆಯಲ್ಲಿ ಕೃತಿ ರಚನೆಕಾರರಾದ ಶುಭಲಕ್ಷ್ಮೀ ಆರ್. ನಾಯಕ್, ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ಕಾರ್ಯದರ್ಶಿ ಕಾಸ್ರಬೈಲು ಸುರೇಶ್ ಪೂಜಾರಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ ಉಪಸ್ಥಿತಿತರಿದ್ದರು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷ ಪ್ರಶಾಂತ್ ಪೂಜಾರಿಯವರು ಸ್ವಾಗತಿಸಿದರು. ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ನಿಕಟ ಪೂರ್ವ ಕಾರ್ಯದರ್ಶಿ ಅಬ್ಬನಡ್ಕ ಹರಿಪ್ರಸಾದ್ ಆಚಾರ್ಯ