ಕುಂದಾಪುರ ಸಂತ ಜೋಸೆಫ್ ವಿದ್ಯಾಸಂಸ್ಥೆಗೆ ಅಪಾಸ್ಟೋಲಿಕ್ ಕಾರ್ಮೆಲ್ ಶಿಕ್ಷಣ ಸಂಸ್ಥೆಯ ಸುಪೀರಿಯರ್ ಜನರಲ್ ಭಗಿನಿ ಮರಿಯಾ ನಿರ್ಮಲಿನಿ ಭೇಟಿ.



ಕುಂದಾಪುರ ಸಂತ ಜೋಸೆಫ್ ವಿದ್ಯಾ ಸಂಸ್ಥೆಗೆ ಆಗಮಿಸಿದ ಅಪೋಸ್ತಲಿಕ್ ಕಾರ್ಮೆಲ್ ಸಂಸ್ಥೆಯ ಸುಪಿರಿಯರ್ ಜನರಲ್ ಹಾಗೂ ಕಾರ್ಮೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿರುವ ಭಗಿನಿ ಮರಿಯ ನಿರ್ಮಲಿನಿ ಇವರನ್ನು ಶಾಲಾ ವಾದ್ಯ ವೃಂದದೊಂದಿಗೆ ಬರಮಾಡಿಕೊಳ್ಳಲಾಯಿತು. ಶಾಲಾ ಶಿಕ್ಷಕರನ್ನು ಭೇಟಿ ಮಾಡಿದ ಭಗಿನಿ ಮರಿಯಾ ನಿರ್ಮಲಿನಿ ಮಾತನಾಡಿ ಇಂದಿನ ಸ್ಪರ್ಧಾತ್ಮಕ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಬೇಕು.
ಶಿಕ್ಷಕರಾದವರು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದರು. ಶಾಲಾ ಜಂಟಿ ಕಾರ್ಯದರ್ಶಿಯರಾದ ಭಗಿನಿ ಆಶಾ ಇವರು ಸ್ವಾಗತಿಸಿದರು. ಕಾನ್ವೆಂಟಿನಾ ಸುಪಿರಿಯರ್ ಭಗಿನಿ ಸಂಗೀತ ಇವರು ಶುಭ ಹಾರೈಸಿದರು. ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನಿ ಭಗಿನಿ ಪ್ರೇಮಿಕಾ , ಶಿಕ್ಷಕ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಭಗಿನಿ ಐವಿ ಇವರು ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕರಾದ ಅಶೋಕ್ ದೇವಾಡಿಗ ಇವರು ವಂದಿಸಿದರು
.