ಕೌಶಲ್ಯ ಅಭಿವೃದ್ಧಿಯು ಸ್ಪರ್ಧೆಯನ್ನು ಗೆಲ್ಲುವ ಮಾರ್ಗವಾಗಿದೆ


ಶಿರ್ವ: ಇಲ್ಲಿನ ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಗಣಕ ವಿಜ್ಞಾನ ವಿಭಾಗವು ತನ್ನ ಘಟಕವಾದ ಐಟಿ ಕ್ಲಬ್ ನ ಮೂಲಕ ಬಿಸಿಎ ವಿದ್ಯಾರ್ಥಿಗಳಿಗೆ ಆಯೋಜಿಸಿದ ರೈಜೆನ್23 ಐಟಿ ಕಾಂಪಿಟೇಶನ್ಸ್ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ! ಹೆರಾಲ್ಡ್ ಐವನ್ ಮೋನಿಸ್ ಅಧ್ಯಕ್ಷ ನೆಲೆಯಲ್ಲಿ ಮಾತನಾಡಿ ವಿಜೇತರಿಗೆ ಪ್ರಮಾಣ ಪತ್ರ ಜೊತೆಗೆ ಬಹುಮಾನಗಳನ್ನು ವಿತರಿಸಿದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮಲ್ಲಿ ಅಡಗಿರುವಂತ ವಿವಿಧ ಕೌಶಲಗಳನ್ನು ವೃದ್ಧಿಸಿಕೊಳ್ಳುವ ಮೂಲಕ ಎಲ್ಲಾ ರೀತಿಯ ಸ್ಪರ್ಧೆಗಳನ್ನು ಗೆಲ್ಲಲು ಸಾಧ್ಯ ಎಂದು
ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಹಾಗೂ ಐಟಿ ಕ್ಲಬ್ ನಿರ್ದೇಶಕ ಲೆಫ್ಟಿನೆಂಟ್ ಶ್ರೀ ಕೆ ಪ್ರವೀಣ್ ಕುಮಾರ್ ರೈಜೆನ್23 ಐಟಿ ಕಾಂಪಿಟೇಶನ್ಸ್ ಬಗ್ಗೆ ಮಾರ್ಗದರ್ಶನ ನೀಡಿ ಮಾತನಾಡಿದರು. ಈ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಲ್ಲಿ ಅಡಗಿರುವ ವಿವಿಧ ಕೌಶಲ್ಯಗಳನ್ನು ವೃದ್ಧಿಸುವ ರಸಪ್ರಶ್ನೆ, ಕೋಡಿಂಗ್, ಗೇಮಿಂಗ್,ರಂಗೋಲಿ,ಅಣುಕು ಸಂದರ್ಶನ, ಪೋಸ್ಟರ್ ತಯಾರಿಕೆ, ನಿಧಿ ಬೇಟೆ,ಪವರ್ಪಾಯಿಂಟ್ ಪ್ರಸ್ತುತಿ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಇದೇ ಸಂದರ್ಭದಲ್ಲಿ ವಿಪ್ರೊ ಕ್ಯಾಂಪಸ್ ಪ್ಲೇಸ್ಮೆಂಟ್ ಡ್ರೈವಲ್ಲಿ ಆಯ್ಕೆಯಾದ ಕು. ನಿವೇದಿತಾ ನಿಖಿಲ್ ಪೂಜಾರಿ ಇವರನ್ನು ಅಭಿನಂದಿಸಲಾಯಿತು. ವಿದ್ಯಾರ್ಥಿಗಳಾದ ಮಾನ್ವಿತ ಎಸ್ ಸುವರ್ಣ, ಡಿಯೋನ್ ಜೋಯಲ್ ಪಿಂಟೋ ಈ ಸ್ಪರ್ಧೆಯ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.
ಈ ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಶ್ರೀಮತಿ ದಿವ್ಯಶ್ರೀ ಬಿ, ಸುಷ್ಮಾ, ಬಿಸಿಎ ವಿಭಾಗದ ಎಲ್ಲಾ ಅಧ್ಯಾಪಕ-ಅಧ್ಯಾಪಕೇತರಬಂಧುಗಳು , ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಎಲ್ರುಶಾ ಮಿಲಿನಾ ಡಿಸಾ ಬಹುಮಾನ ಪಟ್ಟಿಯನ್ನು ವಾಚಿಸಿದರು.ವಿದ್ಯಾರ್ಥಿಗಳಾದ ಗೌರವ ಬಂಗೇರ ಮತ್ತು ತಂಡ, ಆಲಿಸ್ಟರ್ ಸುಜಾಯ್ ಡಿಸೋಜ, ಅನುಪ್ ನಾಯಕ ಸಹಕರಿಸಿದರು.ಕು.ಶ್ರೀಲಕ್ಷ್ಮಿ ಪ್ರಾರ್ಥಿಸಿದರು. ಕು. ಛಾಯಾ ಏ ಕರ್ಕೇರ ಸ್ವಾಗತಿಸಿ, ಪದ್ಮಶ್ರೀ ಭಟ್ ವಂದಿಸಿದರು. ಕು. ಫೈಝ ಭಾನು ಕಾರ್ಯಕ್ರಮ ಸಂಯೋಜಿಸಿದರು.