

ಶ್ರೀನಿವಾಸಪುರ : ಬೇಸಿಗೆ ಕಾಲ ಪ್ರಾರಂಭವಾದ್ದರಿಂದ ಕುಡಿಯುವ ನೀರಿನ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ವಿಶೇಷ ಕಾಳಜಿ ವಹಿಸಲಾಗಿದೆ. ಎಲ್ಲಿ ಶುದ್ಧ ನೀರಿನ ಘಟಕವು ಕೆಟ್ಟುಹೋಗಿದೆಯೋ ಅವುಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಸರ್ಕಾರಕ್ಕೆ ಪತ್ರವನ್ನು ರವಾನಿಸಲಾಗಿದೆ. ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಟಾಸ್ಕ್ ಪೋರ್ಸ್ ಮಾಡಲಾಗಿದೆ. ಯಾವ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆಯೂ ಅವುಗಳನ್ನ ಪತ್ತೆ ಹಚ್ಚಿ ತಕ್ಷಣ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗಿದೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ತಿಳಿಸಿದರು.
ಪಟ್ಟಣದ ಹೊರವಲಯದ ಹೊಗಳಗೆರೆ ಮಾವು ಸಂಶೋದನಾ ಕೇಂದ್ರದಲ್ಲಿ ಸೋಮವಾರ ತಾಲೂಕು ಮಟ್ಟದ ಅಧಿಕಾರಿಗಳ ಹಾಗು ಗ್ರಾ.ಪಂ ಪಿಡಿಒಗಳ ಕೆಡಿಪಿ ಸಭೆಯಲ್ಲಿ ಮಾತನಾಡಿದರು.
ಗೌನಿಪಲ್ಲಿಗೆ ಸಂಬಂದಿಸಿದಂತೆ 15 ಕಿಮೀ ದೂರವನ್ನ ಸುಮಾರು 20 ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆಯಲಿದ್ದು , ಒಂದು ವಾರದಲ್ಲಿ ಕಾಮಗಾರಿ ಪ್ರಾರಂಭವಾಗುವುದು.ಕೋಲಾರ -ಶ್ರೀನಿವಾಸಪುರ ರಸ್ತೆಯು 10 ಕೋಟಿ ವೆಚ್ಚದಲ್ಲಿ ರಸ್ತೆ ಅಗಲೀಕರಣಕ್ಕೆ ಸಂಬಂದಿಸದಂತೆ ಕಾಮಗಾರಿ 15 ದಿನಗಳಲ್ಲಿ ಪ್ರಾರಂಭವಾಗುವುದು. ಈಗಾಗಲೇ ಗ್ರಾಮೀಣ ಭಾಗದ ರಸ್ತೆಗಳ ಕಾಮಗಾರಿಗಳು ಪ್ರಾರಂಭವಾಗಿದ್ದು , ಇನ್ನು ಎಂಎಲ್ಎ ಅನುದಾನ ಬಿಡುಗಡೆಯಾಗಿಲ್ಲ . ಅನುದಾನ ಬಿಡುಗಡೆಯಾದ ತಕ್ಷಣ ಗ್ರಾಮೀಣ ಭಾಗದಲ್ಲಿ ರಸ್ತೆಗಳು ನಿರ್ಮಾಣವಾಗುವುದು. ಇದಕ್ಕೆ ಸಂಬಂದಿದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.
ಮಾವು ಮಾರುಕಟ್ಟೆಯು ಪ್ರಾರಂಭವಾಗಿದ್ದು, ಎಪಿಎಂಸಿ ಮಾರುಕಟ್ಟೆಯಲ್ಲಿ ಸ್ವಚ್ಚತೆ ಕಾಪಾಡಲು ಬೇಕಾದ ವ್ಯವಸ್ಥೆ ಮಾಡುವಂತೆ ಕಾರ್ಯದರ್ಶಿಗೆ ಸೂಚಿಸಲಾಗಿದೆ. ಪಿಡಬ್ಲ್ಯುಡಿ ಇಲಾಖೆ ಅಧಿಕಾರಿಗಳಿಗೆ ರಸ್ತೆಗಳ ಕಾಮಗಾರಿಗಳನ್ನು ಗುಣಮಟ್ಟ ಕಾಪಾಡಲು ಸೂಚಿಸಲಾಗಿದೆ. ತಾಲೂಕಿಗೆ ಸಂಬಂದಿಸಿದಂತೆ ಕೆಲ ರಸ್ತೆಗಳ ಟೆಂಡರ್ ಪ್ರಕ್ರಿಯೆಗಳು ಗುತ್ತಿಗೆದಾರಾರು ವಾಪಸ್ಸು ಪಡೆದಿದ್ದು, ಗುತ್ತಿಗೆದಾರರ ಮನವೊಳಿಸಿ ಪುನಃ ಕಾಮಗಾರಿಗಳನ್ನು ಅತಿ ಶೀಘ್ರವಾಗಿ ಪ್ರಾರಂಭಿಸಲಾಗುವುದು.

2026 ರ ವೇಳೆಗೆ ಜೆಜೆಎಂ ಯೋಜನೆ ಪೂರ್ಣಗೊಳ್ಳುವುದರಿಂದ ಅಧಿಕಾರಿಗಳು ಗುತ್ತಿಗೆದಾರಿಗೆ ಸೂಚನೆ ನೀಡಿ ಕಾಮಗಾರಿಯನ್ನು ಗುಣಮಟ್ಟವನ್ನು ಕಾಪಾಡುವುದರ ಜೊತೆಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ವ್ಯವಸ್ಥೆ ಮಾಡುವಂತೆ ಆದೇಶಸಿದರು. ಅಲ್ಲದೆ ತಹಶೀಲ್ದಾರ್ ಕಚೇರಿಗೆ ಬರುವ ಸಾರ್ವಜನಿಕರ ಕೆಲಸವನ್ನು ಕಾನೂನು ರೀತ್ಯ ಇದ್ದರೆ ತಕ್ಷಣ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ತಹಶೀಲ್ದಾರ್ ಜಿ.ಎನ್.ಸುದೀಂದ್ರ, ಇಒ ಎಸ್.ಶಿವಕುಮಾರಿ ಹಾಗೂ ವಿವಿಧ ಇಲಾಖೆಯ ಸಹಾಯಕ ನಿರ್ದೇಶಕರು, ತಾಲೂಕಿನ ಗ್ರಾ.ಪಂ ಪಿಡಿಒರವರು ಹಾಜರಿದ್ದರು.