ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಉಡುಪಿ ಜಿಲ್ಲಾ ಸಮಿತಿಯ ನೂತನ ಜಿಲ್ಲಾಧ್ಯಕ್ಷರಾಗಿ ಶ್ರೀಕಾಂತ್ ಶೆಣೈ

Photos: STANY DALMEIDA

ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ(ರಿ) ಬೆಂಗಳೂರು
ಉಡುಪಿ ಜಿಲ್ಲಾ ಸಮಿತಿಯ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಗೊಂಡ ಶ್ರೀಕಾಂತ್ ಶೆಣೈರವರಿಗೆ ಮಾಜಿ ಅಧ್ಯಕ್ಷರಾದ ಶ್ರೀ ನಾಗರಾಜ್ ಭಟ್ ಪಾಂಗಳ ಇವರು ಇಂದು ಅಧಿಕೃತ ಅಧಿಕಾರ ಹಸ್ತಾಂತರವನ್ನು ಮಾಡಿದರು ಹಾಗೂ ನೂತನವಾಗಿ ಆಯ್ಕೆಗೊಂಡ ಜಿಲ್ಲಾ ಉಪಾಧ್ಯಕ್ಷರಾದ ಶ್ರೀಯುತ ಅಶೋಕ್ ಸುವರ್ಣ ಕಾರ್ಕಳ ಮತ್ತು ಕೃಷ್ಣ ಕುಲಾಲ್ ಮಣಿಪಾಲ್, ಜಿಲ್ಲಾ ಕಾರ್ಯದರ್ಶಿಯಾದ ಸುರೇಶ್ ಪೂಜಾರಿ, ಕೋಶಾಧ್ಯಕ್ಷರಾದ ಆನಂದ ಸೇರಿಗಾರ್, ಜೊತೆ ಕಾರ್ಯದರ್ಶಿಯಾದ ರವಿಚಂದ್ರ ವಿಕೆ , ತಮ್ಮ ತಮ್ಮ ಅಧಿಕಾರವನ್ನು ಸ್ವೀಕರಿಸಿ ಕಾರ್ಯಪ್ರವೃತ್ತರಾದ ಸಂಘಟನಾ ಕಾರ್ಯದರ್ಶಿಯಾದ ಜಯಸುದರ್ಶನ್ ತೆಕ್ಕಟ್ಟೆಯವರಿಗೆ ಅಭಿನಂದನೆ ಸಲ್ಲಿಸಲಾಯಿತು. ಈ ಹಿಂದೆ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಶ್ರೀಯುತ ನಾಗರಾಜ್ ಭಟ್ ಪಾಂಗಳ ಹಾಗೂ ಉಳಿದೆಲ್ಲ ಕಾರ್ಯವನ್ನು ನಡೆಸುತ್ತಿದ್ದ ಉಡುಪಿ ಜಿಲ್ಲಾ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳಿಗೆ ಮತ್ತು ಸದಸ್ಯರುಗಳಿಗೆ ಧನ್ಯವಾದಗಳನ್ನು ಸಲ್ಲಿಸಲಾಯಿತು.