

ಶ್ರೀನಿವಾಸಪುರ : ತಾಲೂಕಿನ ಕೂರಿಗೇಪಲ್ಲಿ ಗ್ರಾ.ಪಂಚಾಯತಲ್ಲಿ ಒಟ್ಟು 12 ಸದಸ್ಯರಿದ್ದು ಅದರಲ್ಲಿ ಕಾಂಗ್ರೆಸ್ ಬೆಂಬಲಿತ 11 ಸದಸ್ಯರಿದ್ದು, ಒಬ್ಬರು ಜೆಡಿಎಸ್ ಬೆಂಬಲಿತ ಸದಸ್ಯರಿದ್ದು, ಅದರಲ್ಲಿ ಕಾಂಗ್ರೆಸ್ ಬೆಂಬಲಿತ 9 ಸದಸ್ಯರು ಹಾಜರಾಗಿ, 2 ಸದಸ್ಯ ಗೈರು ಹಾಜರಾಗಿದ್ದು. ಈ ಹಿಂದೆ ಇದ್ದ ಯಲ್ಲಮ್ಮ ಜಯರಾಮ್ ಅವಿಶ್ವನಿರ್ಣಯದಿಂದ ತೆರವುಗೊಂಡ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಯಡಗಾನಪಲ್ಲಿ ವೆಂಕಟಲಕ್ಷ್ಮಮ್ಮ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಮುಂದಿನ ಅವಧಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ನಾರಾಯಣಸ್ವಾಮಿ ಘೋಷಿಸಿದರು.
ಮುಖಂಡ ದೊರಸ್ವಾಮಿರೆಡ್ಡಿ ಮಾತನಾಡಿ ಮಾಜಿ ಶಾಸಕ ಕೆ.ಆರ್.ರಮೇಶ್ಕುಮಾರ್ ರವರ ಮಾರ್ಗದರ್ಶನ ದಂತೆ ಗ್ರಾಮಪಂಚಾಯಿತಿಯನ್ನ ಅಭಿವೃದ್ಧಿ ಪಡಿಸುವುದಾಗಿ ತಿಳಿಸಿದರು. ಸಾರ್ವಜನಿಕರು ಪಕ್ಷಾತೀತವಾಗಿ ಬಂದು ಕೆಲಸ ಕಾರ್ಯಗಳನ್ನು ಮಾಡಿಸಿಕೊಂಡು ಪಂಚಾಯಿತಿ ಅಭಿವೃದ್ಧಿ ಕೈಜೋಡಿಸಬೇಕು ಎಂದರು.
ಸದಸ್ಯ ವಿಶ್ವನಾಥರೆಡ್ಡಿ ಮಾತನಾಡಿ ಮುಂದಿನ ದಿನಗಳಲ್ಲಿ ಗ್ರಾಮಪಂಚಾಯಿತಿಯನ್ನು ಪ್ರತಿ ಕಾರ್ಯಗಳಲ್ಲಿ ಮಾಜಿ ಶಾಸಕ ಕೆ.ಆರ್.ರಮೇಶ್ಕುಮಾರ್ ರವರ ಮಾರ್ಗದರ್ಶನದಲ್ಲಿ ಅಭಿವೃದ್ಧಿಪಡಿಸಿ, ತಾಲೂಕಿನಲ್ಲಿಯೇ ಮಾದರಿ ಗ್ರಾ.ಪಂ ಮಾಡುವುದಾಗಿ ತಿಳಿಸಿದರು.
ಪಿಡಿಒ ರಮೇಶ್, ಗ್ರಾ.ಪಂ ಉಪಾಧ್ಯಕ್ಷ ಶ್ರೀರಾಮರೆಡ್ಡಿ, ಸದಸ್ಯ , ಆರ್.ಶ್ರೀನಿವಾಸ್, ಮುಖಂಡರಾದ ಪಿ.ವಿ.ನಾಗರಾಜ್, ಗೋವಿಂದರೆಡ್ಡಿ, ಶಂಕರರೆಡ್ಡಿ ಹಾಗು ಗ್ರಾಮಸ್ಥರು ಹಾಜರಿದ್ದರು.