

ಶ್ರೀನಿವಾಸಪುರ: ಕ್ಷೇತ್ರದಲ್ಲಿ ಮೂಲ ಸೌಕರ್ಯ ಕಲ್ಪಿಸಲು ಮೊದಲ ಆದ್ಯತೆ ನೀಡಲಾಗಿದೆ. ಎಲ್ಲೇ ಮೂಲ ಸೌಕರ್ಯದ ಕೊರತೆ ಕಂಡುಬಂದರೂ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ತಾಲ್ಲೂಕಿನ ಮುದಿಮಡಗು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಟಪಲ್ಲಿ ಗ್ರಾಮಕ್ಕೆ ಗುರುವಾರ ಶಾಸಕ ಕೆ.ಆರ್.ರಮೇಶ್ ಕುಮಾರ್ ಭೇಟಿ ನೀಡಿ ಸಾರ್ವಜನಿಕರ ಕುಂದು ಕೊರತೆ ವಿಚಾರಿಸಿ ಮಾತನಾಡಿದರು.
ತಾಲ್ಲೂಕಿನಲ್ಲಿ ಸರ್ಕಾರಿ ಸೌಲಭ್ಯ ನೀಡುವಲ್ಲಿ ತಾರತಮ್ಯ ಮಾಡಿಲ್ಲ. ಯಾವುದೇ ಸೌಲಭ್ಯವಿರಲಿ ಪಕ್ಷಾತೀತವಾಗಿ ಅರ್ಹ ಫಲಾನುಭವಿಗಳಿಗೆ ನೀಡಲಾಗಿದೆ. ಮನೆ ಇಲ್ಲದವರಿಗೆ ಮನೆಗಳನ್ನು ನಿರ್ಮಿಸಿಕೊಡಲಾಗಿದೆ. ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಎಚ್ಚರ ವಹಿಸಲಾಗಿದೆ. ಅಗತ್ಯ ಇರುವ ಕಡೆ ಶುದ್ಧ ಕುಡಿಯುವ ನೀರು ಘಟಕ ಸ್ಥಾಪಿಸಲಾಗಿದೆ. ಗ್ರಾಮೀಣ ರಸ್ತೆಗಳ ನಿರ್ಮಾಣ ಹಾಗೂ ದುರಸ್ತಿಗೆ ಗಮನ ನೀಡಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮದ ಸುಬ್ಬನಾಯಕ್, ಚಲಪತಿ, ಕಿಟ್ಟಣ್ಣ ಕುಟುಂಬದ ಸದಸ್ಯರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದರು. ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಇದ್ದರು.