

ಶ್ರೀನಿವಾಸಪುರ: ತಾಲ್ಲೂಕಿನ ಅರಿಕೆರೆ ಗ್ರಾಮದ ಸಮೀಪ, ಶ್ರೀನಿವಾಸಪುರ ಮುಳಬಾಗಿಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಬೆಳಿಗ್ಗೆ ಲಾರಿ ಮತ್ತು ಈಚರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮವಾಗಿ ಒಬ್ಬರು ಸ್ಥಳದಲ್ಲಿಯೇ ಸತ್ತು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ತಮಿಳು ನಾಡಿನ ಈಚರ್ ಚಾಲಕ ಸತ್ಯ (35) ಸ್ಥಳದಲ್ಲಿಯೇ ಸತ್ತಿದ್ದಾರೆ. ಲಾರಿ ಚಾಲಕ ಹಾಗೂ ಕ್ಲೀನರ್ ತೀವ್ರವಾಗಿ ಗಾಯಗೊಂಡಿದ್ದು, ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.
ಅಪಘಾತದಲ್ಲಿ ಲಾರಿ ಹಾಗೂ ಈಚರ್ ನಜ್ಜುಗುಜ್ಜಾಗಿದ್ದು, ಶ್ರೀನಿವಾಸಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.