ಶ್ರೀನಿವಾಸಪುರ:ಅಮೃತ ಮಹೋತ್ಸವ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ರಾಷ್ಟ್ರ ಪ್ರೇಮದ ಸಂಕೇತವಾಗಿ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಬೇಕು

ಶ್ರೀನಿವಾಸಪುರ: ಅಮೃತ ಮಹೋತ್ಸವ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಸಮಾಜದ ಎಲ್ಲ ವರ್ಗದ ಜನರೂ ರಾಷ್ಟ್ರ ಪ್ರೇಮದ ಸಂಕೇತವಾಗಿ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಎಂ.ಜಯರಾಂ ಹೇಳಿದರು.
ಪಟ್ಟಣದ ಪುರಸಭೆ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ರಾಷ್ಟ್ರ ಧ್ವಜ ಮಾರಾಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರದ ಅದೇಶದಂತೆ ಆ.13 ರಿಂದ ಎಲ್ಲ ಮನೆಗಳ ಮೇಲೂ ಮೂರು ದಿನಗಳ ಕಾಲ ಧ್ವಜಾರೋಹಣ ಮಾಡುವಂತೆ ಮನವಿ ಮಾಡಿದರು.
ಕಂದಾಯ ನಿರೀಕ್ಷಕ ವಿ.ನಾಗರಾಜ್, ಶಂಕರ್, ಎಂ.ಎನ್.ನಾಗರಾಜ್, ಫಾತಿಮಾ ಬೇಗಂ ಮತ್ತಿತರರರು ಇದ್ದರು.