ಶ್ರೀನಿವಾಸಪುರ: ಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರತಿಭಟನೆ

ಶ್ರೀನಿವಾಸಪುರ: ಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಕ್ಷೇತ್ರ ಶಿಕ್ಷಣಾಧಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಬಿಜೆಪಿ ಯುವ ಮೋರ್ಚಾ ಘಟಕದ ಕಾರ್ಯದರ್ಶಿ ನಿಶಾಂತ್ ರೆಡ್ಡಿ ಈ ಸಂದರ್ಭದಲ್ಲಿ ಮಾತನಾಡಿ, ಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲೆ ರಾಧಾಮಣಿ ಅವರು ವಿದ್ಯಾರ್ಥಿಗಳಿಗೆ ವರ್ಗಾಣೆ ಪತ್ರ ಹಾಗೂ ಎರಡನೇ ಅಂಕಪಟ್ಟಿ ನೀಡಲು ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ ವಿಚಾರಣೆ ನಡೆಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಕೋರಲಾಗಿತ್ತು. ಉಪ ಪ್ರಾಂಶುಪಾಲೆ ರಾಧಾಮಣಿ ಅವರು ವಿದ್ಯಾರ್ಥಿಗಳನ್ನು ಹಣ ಕೇಳಿರುವ ವೀಡಿಯೋ ನೀಡಲಾಗಿತ್ತು. ಆದರೆ ಕ್ರಮ ಕೈಗೊಳ್ಳದಿರುವುದರಿಂದ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಭಾಗ್ಯಲಕ್ಷ್ಮಿ ಮಾತನಾಡಿ, ವಿಷಯಕ್ಕೆ ಸಂಬಂಧಿಸಿದಂತೆ ಶೀಘ್ರವಾಗಿ ವಿಚಾರಣೆ ನಡೆಸಿ, ಹಿರಿಯ ಅಧಿಕಾರಿಗಳಿಗೆ ವರದಿ ನೀಡಲಾಗುವುದು ಎಂದು ಹೇಳಿದರು. ಸುಹಾಸ್, ಮಂಜುನಾಥ್, ಶೇಖ ಶಫಿವುಲ್ಲಾ ಮತ್ತಿತರರು ಇದ್ದರು.