ಶ್ರೀನಿವಾಸಪುರ: ಇಲ್ಲಿನ ಪುರಸಭೆಗೆ 2018 – 19ನೇ ಸಾಲಿನಲ್ಲಿ ಬೀದಿ ಬದಿ ವ್ಯಾಪಾರಿಗಳ ನಿರ್ವಹಣೆಗೆ ತೃತೀಯ ಬಹುಮಾನ ಬಂದಿದೆ.

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಇಲ್ಲಿನ ಪುರಸಭೆಗೆ 2018 – 19ನೇ ಸಾಲಿನಲ್ಲಿ ಬೀದಿ ಬದಿ ವ್ಯಾಪಾರಿಗಳ ನಿರ್ವಹಣೆಗೆ ತೃತೀಯ ಬಹುಮಾನ ಬಂದಿದೆ.
ಬೆಂಗಳೂರಿನ ವಿಕಾಸ ಸೌಧದಲ್ಲಿ ಕರ್ನಾಟಕ ಸಿಟಿ ಮ್ಯಾನೇಜರ್ ಅಸೋಸಿಯೇಷನ್ ಹಾಗೂ ಪೌರಾಡಳಿತ ನಿದೇಶನಾಲಯದ ಸಹಯೋಗದೊಂದಿಗೆ ಈಚೆಗೆ ಏರ್ಪಡಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ಸಣ್ಣ ಕೈಗಾರಿಕೆ ಸಚಿವ ಎಂ.ಟಿ.ಬಿ ನಾಗರಾಜ್ ಪ್ರಶಸ್ತಿ ಪ್ರದಾನ ಮಾಡಿದರು.
ಬಹುಮಾನವಾಗಿ ರೂ.50 ಸಾವಿರದ ಚೆಕ್, ಪ್ರಶಸ್ತಿ ಪತ್ರ ಹಾಗೂ ಪಾರಿತೋಷಕವನ್ನು ಪುರಸಭೆ ಮುಖ್ಯಾಧಿಕಾರಿ ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ಹಿಂದಿನ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಸ್ವೀಕರಿಸಿದರು.
ಪರಿಸರ ಅಭಿಯಂತರ ಡಿ.ಶೇಕರ್, ಆರೋಗ್ಯ ನಿರೀಕ್ಷಕ ಕೆ.ಜಿ.ರಮೇಶ್. ಅಧಿಕಾರಿಗಳಾದ ಎನ್.ಶಂಕರ್, ಎಸ್.ವಿ.ನಾಗೇಶ್ ಬಾಬು ಇದ್ದರು.