

ಗಂಗೊಳ್ಳಿ; ಪರಿಸರ ದಿನಾಚರಣೆಯ ಅಂಗವಾಗಿ ದಿನಾಂಕ: 05-06- 2025 ಗುರುವಾರದಂದು ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿಜ್ಞಾನ ಶಿಕ್ಷಕಿ ಶ್ರೀಮತಿ ಶಾಂತಿ ಕ್ರಾಸ್ತರವರ ಮಾರ್ಗದರ್ಶನದಲ್ಲಿ ಪರಿಸರ ದಿನಾಚರಣೆಯನ್ನು ವಿನೂತನ ಶೈಲಿಯಲ್ಲಿ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ‘ಬೀಜದ ಉಂಡೆ’ ತಯಾರಿಸುವ ಪ್ರಾತ್ಯಕ್ಷತೆಯನ್ನು ಪ್ರದರ್ಶಿಸಿ ಗಿಡಮರಗಳನ್ನು ಬೆಳೆಸುವ ಮತ್ತು ಪೋಷಿಸುವ ಕಲೆಯನ್ನು ತಿಳಿಸಲಾಯಿತು. ಪರಿಸರಕ್ಕೆ ಸಂಬಂಧಿಸಿದ ಸ್ಥಬ್ಧ ಚಿತ್ರವನ್ನು ಬಳಸಿ ಕಿರು ಪ್ರಹಸನ ಮಾಡಲಾಯಿತು. ವಿದ್ಯಾರ್ಥಿಗಳು ಹಸಿರು ದಿರಿಸನ್ನು ಧರಿಸಿ ಗಿಡಗಳನ್ನು ನೆಟ್ಟರು. ಕೊನೆಯಲ್ಲಿ ಪರಿಸರ ಗೀತೆಯನ್ನು ವಿದ್ಯಾರ್ಥಿಗಳು ಹಾಡಿದರು.
ಮುಖ್ಯೋಪಾಧ್ಯಾಯರು, ಶಿಕ್ಷಕ ಶಿಕ್ಷಕೇತರ ವ್ರಂದದವರು ಉಪಸ್ಥಿತರಿದ್ದರು.















