ಯೋಗ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ವಿದ್ಯಾರ್ಥಿ ಆಕಾಶ್ ಆಯ್ಕೆ

ಶ್ರೀನಿವಾಸಪುರ : ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಟ್ಟದ ಕ್ರೀಡಾಕೂಟಗಳಲ್ಲಿ ಹೋಬಳಿ ಮಟ್ಟ ಹಾಗೂ ತಾಲ್ಲೂಕು ಮಟ್ಟದ ಯೋಗ ಕ್ರೀಡಾಕೂಟದಲ್ಲಿ ಭಾಗವಹಿಸಿ ಜಯಗಳಿಸಿ ಜಿಲ್ಲಾಮಟ್ಟದ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಶ್ರೀನಿವಾಸಪುರ ತಾಲ್ಲೂಕಿನ ಗೌನಿಪಲ್ಲಿ ಗ್ರಾಮದ ಜೆ ತಿರುಮಲಪ್ಪ ಎಜುಕೇಶನಲ್ ಟ್ರಸ್ಟ್ ನ ಶ್ರೀ ಸಪ್ತಗಿರಿ ವಿದ್ಯಾಲಯದ ಆಕಾಶ್ ಆರ್ ಎಂಬ ವಿದ್ಯಾರ್ಥಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು  ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ 10ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿರುವ ಬಚ್ಚಿರೆಡ್ಡಿಗಾರಪಲ್ಲಿ ಗ್ರಾಮದ ಆಕಾಶ್ ಆರ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಶಾಲೆಯ ಕೀರ್ತಿ ಹಾಗೂ ತಾಲ್ಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾನೆ ಜಿಲ್ಲಾಮಟ್ಟದಲ್ಲಿ ಜಯಗಳಿಸಿ ಶಾಲೆಗೆ ಆಗಮಿಸಿದ ಕ್ರೀಡಾಪಟು  ಆಕಾಶ್ ಗೆ ಶಾಲಾ ಆಡಳಿತ ಮಂಡಳಿ ಹಾಗೂ  ಶಿಕ್ಷಕ ವೃಂದದಿಂದ ಅಭಿನಂದಿಸಲಾಯಿತು ಇದೇ ಸಂದರ್ಭದಲ್ಲಿ ಶಾಲಾ ಕಾರ್ಯದರ್ಶಿ ವೆಂಕಟೇಶ್ ಮಾತನಾಡಿ ತಾಲೂಕು ಮಟ್ಟ ಹಾಗೂ ಜಿಲ್ಲಾ ಮಟ್ಟದಲ್ಲಿ ಯೋಗ ಸ್ಪರ್ಧೆಯಲ್ಲಿ ಜಯಗಳಿಸಿ ಉತ್ತಮ ಸಾಧನೆಮಾಡಿ ನಮ್ಮ ಶಾಲೆ,ತಾಲ್ಲೂಕಿನ ಹಾಗೂ ಪೋಷಕರ ಕೀರ್ತಿಯನ್ನು ಹೆಚ್ಚಿಸಿದ್ದಾನೆ ಜಿಲ್ಲಾ ಮಟ್ಟದಲ್ಲಿ ಆರು ತಾಲ್ಲೂಕುಗಳಿಂದ ಹಲವು ಕ್ರೀಡಾಪಟುಗಳು ಭಾಗವಹಿಸಿರುತ್ತಾರೆ ಜಯಗಳಿಸುವುದು ಸುಲಭ ಪ್ರಶ್ನೆಯಲ್ಲ ಕ್ರೀಡಾಪಟುವಿಗೆ ತರಬೇತಿ ನೀಡಿರುವ ಗಣಿತ ಶಿಕ್ಷಕ ಗುರುಪ್ರಸಾದ್ ರವರಿಗೂ ಅಭಿನಂದನೆಗಳನ್ನು ತಿಳಿಸಿದರು ಇನ್ನೂ ಈ ಸಂದರ್ಭದಲ್ಲಿ ಶಾಲಾ ಅಧ್ಯಕ್ಷರು ಭಾಗ್ಯಲಕ್ಷ್ಮಿ,ಶಾಲಾ ಕಾರ್ಯದರ್ಶಿ ಟಿ ವೆಂಕಟೇಶ್, ಮುಖ್ಯಶಿಕ್ಷಕರ ಲಕ್ಷ್ಮೀರಮಣ ಹಾಗೂ ಶಾಲಾ ಶಿಕ್ಷಕ ವೃಂದದವರು ಭಾಗವಹಿಸಿದ್ದರ.