

ಕೋಟ, ಜೂ.15; ಎಸು ಕ್ರಿಸ್ತರ 2025 ವರ್ಷಗಳ ಮಹೋತ್ಸವದ ಅಂಗವಾಗಿ ಕೋಟ ಸಂತ ಜೋಸೆಫ್ ಚರ್ಚಿನಲ್ಲಿ ವಿದ್ಯಾರ್ಥಿಗಳ ಮಹೋತ್ಸವನ್ನು ಆಚರಿಸಲಾಯಿತು. ಚರ್ಚಿನ ಧರ್ಮಗುರುಗಳಾದ ವಂ।ಸ್ಟ್ಯಾನಿ ತಾವ್ರೊ ಅವರು ಪವಿತ್ರ ಬಲಿದಾನವನ್ನು ಅರ್ಪಿಸಿದರು. ವಿದ್ಯಾರ್ಥಿಗಳು ಬಲಿದಾನದ ದೇವ ಸ್ತುತಿ ಪ್ರಾರ್ಥನೆಗಳನ್ನು ನಡೆಸಿಕೊಟ್ಟರು.
ನಂತರ ನಡೆದ ಸಭಾಕಾರ್ಯಕ್ರಮದಲ್ಲಿ ಕುಂದಾಪುರ ಸಂತ ಮೇರಿಸ್ ಪಿ.ಯು.ಕಾಲೇಜಿನ ಪ್ರಾಂಶುಪಾಲೆ ರೆಶ್ಮಾ ಫೆರ್ನಾಂಡಿಸ್ ಮುಖ್ಯ ಅತಿಥಿಗಳಾಗಿ ಆಗಮಿಸಿ ಸಂದೇಶ ನೀಡಿದರು. ವಿದ್ಯಾಥಿಗಳಿಗೆ ಭಾಶಣ ಸ್ಪರ್ಧೆ ಮತ್ತು ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಸಂತ ಅಂತೋನಿಯವರ ವೇಷಧಾರಣೆ ಮಾಡಿದ ಬಾಲಕ ಎಲ್ಲರ ಮೆಚ್ಚುಗೆಗೆ ಪಾತ್ರನಾದನು. ಕಾರ್ಯಕ್ರಮವನ್ನು ಶಿಕ್ಷಕರು ನಡೆಸಿಕೊಟ್ಟರು. ಪೋಷಕರು ಮಕ್ಕಳನ್ನು ಹುರಿದುಂಬಿಸಿ ಪ್ರೋತ್ಸಾಹಿಸಿದರು.














































