ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಆದರ್ಶ ಪಾಲಿಸಬೇಕು :ಎಂ.ವೇಮಣ್ಣ

ಶ್ರೀನಿವಾಸಪುರ: ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಆದರ್ಶ ಪಾಲಿಸಬೇಕು ಎಂದು ಜಿಲ್ಲಾ ವಿಶ್ವ ಹಿಂದೂ ಪರಿಷತ್ತಿನ ಉಪಾಧ್ಯಕ್ಷ ಎಂ.ವೇಮಣ್ಣ ಹೇಳಿದರು.
ಪಟ್ಟಣದ ಸರ್ಕಾರಿ ಕರ್ನಾಟಕ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬಯಲು ರಂಗಮಂದಿರದಲ್ಲಿ ಗುರುವಾರ ಏರ್ಪಡಿಸಿದ್ದ ರಾಷ್ಟ್ರೀಯ ಯುವ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿ ಯುವ ಜನರು ದೇಶದ ನಿಜವಾದ ಶಕ್ತಿ. ತಮ್ಮ ಬುದ್ಧಿವಂತಿಕೆ ಮತ್ತು ಸಾಮಥ್ರ್ಯ ದೇಶದ ಅಭಿವೃದ್ಧಿಗೆ ನೆರವಾಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಶಾಲಾ ಮುಖ್ಯ ಶಿಕ್ಷಕ ಎಂ.ಬೈರೇಗೌಡ ಮಾತನಾಡಿ, ಮನುಷ್ಯ ಎಷ್ಟು ಕಾಲ ಜೀವಿಸುತ್ತಾನೆ ಎಂಬುದು ಮುಖ್ಯವಲ್ಲ. ತನ್ನ ಜೀವಿತಾವಧಿಯಲ್ಲಿ ಸಮಾಜಕ್ಕೆ ಏನು ಕೊಡುಗೆ ನೀಡಿದ್ದಾನೆ ಎಂಬುದು ಮುಖ್ಯವಾಗುತ್ತದೆ. ಸ್ವಾಮಿ ವಿವೇಕಾನಂದರು 39 ವರ್ಷ ಜೀವಿಸಿದ್ದರೂ, ವಿಶ್ವಮಾನ್ಯರಾದರು. ಅವರ ಚಿಂತನೆಗಳು ಜಗತ್ತಿನ ಗಮನ ಸೆಳೆದವು. ಸರ್ವ ಜನಾಂಗದ ಗೌರವಕ್ಕೆ ಪಾತ್ರರಾದ ಅವರು ಯುವ ಸಮುದಾಯಕ್ಕೆ ಸರ್ವಕಾಲಿಕ ಮಾದರಿಯಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಎಸ್‍ಡಿಎಂಸಿ ಅಧ್ಯಕ್ಷ ಆನಂದ್‍ರೆಡ್ಡಿ, ಶಿಕ್ಷಕರಾದ ರಾಮಚಂದ್ರ, ನಾಗರಾಜ್, ನಾರಾಯಣಸ್ವಾಮಿ, ಪ್ರಸನ್ನ ಕುಮಾರ್, ಚೇತನ್, ಭಾರ್ಗವ್, ಮುಸ್ಕಾನ್, ಶಿಕ್ಷಕಿಯರಾದ ವಿಜಯಮ್ಮ, ರೆಡ್ಡಮ್ಮ, ಗೀತಾಂಜಲಿ, ಶ್ರೀದೇವಿ, ಶಶಿಕಲಾ, ಗೌರಮ್ಮ, ಅಶ್ವಿನಿ ಇದ್ದರು.