ಕುಂದಾಪುರ ಕಾಳಾವರದಲ್ಲಿ ಕತ್ತು ಕತ್ತರಿಸಿ ಫೈನಾನ್ಸ್ ಫೈನಾನ್ಶಿಯರ್ ಭೀಕರ ಕೊಲೆ

JANANUDI.COM NETWORK


ಉಡುಪಿ,ಜು.31: ಕುಂದಾಪುರ ತಾಲೂಕು ವ್ಯಾಪ್ತಿಯಲ್ಲಿ ತಡರಾತ್ರಿ ಕೊಲೆಯೊಂದು ನಡೆದಿದೆ. ಡ್ರೀಮ್ ಫೈನಾನ್ಸ್ ನ ಫೈನಾನ್ಶಿಯರ್ ಅಜೇಂದ್ರ ಶೆಟ್ಟಿ (33) ಎಂಬವರನ್ನು ಕತ್ತು ಕತ್ತರಿಸಿ ಕೊಲೆ.ಭೀಕರವಾಗಿ ಕೊಲೆ ಮಾಡಲಾಗಿದೆ.
ಕುಂದಾಪುರ ತಾಲೂಕು ವ್ಯಾಪ್ತಿಯ ಸಳ್ವಾಡಿ ಎಂಬಲ್ಲಿ ಈ ಘಟನೆ ನಡೆದಿದೆ. ಯಡಾಡಿ ಮತ್ಯಾಡಿ ಕೂಡಲ್ ನಿವಾಸಿಯಾಗಿದ್ದ ಅಜೇಂದ್ರ ಶೆಟ್ಟಿ ತಡರಾತ್ರಿಯವರೆಗೆ ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಹುಡುಕಾಟ ನಡೆಸಿದ್ದಾರೆ.ಹುಡಾಕಾಟ ನಡೆಸುತ್ತಿದ್ದ ಸ್ನೇಹಿತರಿಗೆ ಫೈನಾನ್ಸ್ ಒಳಗೆ ಕೊಲೆಯಾದ ಸ್ಥಿತಿಯಲ್ಲಿ ಅಜೇಂದ್ರ ಪತ್ತೆಯಾಗಿದ್ದಾರೆ.ಇವರು ಕಳೆದ ಏಳು ವರ್ಷಗಳಿಂದ ಸಳ್ವಾಡಿಯಲ್ಲಿ ತನ್ನ ಸ್ನೇಹಿತ ಅನೂಪ್ ಎಂಬುವರ ಜೊತೆಗೆ ಸೇರಿ ಹಣಕಾಸು ಸಂಸ್ಥೆ ನಡೆಸುತ್ತಿದ್ದರು.
ಶುಕ್ರವಾರ ರಾತ್ರಿ ಕೃತ್ಯ ನಡೆದಿದ್ದು, ದುಷ್ಕರ್ಮಿಗಳು ಅಜೇಂದ್ರ ಶೆಟ್ಟಿಯನ್ನು ಕೊಲೆ ಮಾಡಿದ ಬಳಿಕ ಅಜೇಂದ್ರ ಶೆಟ್ಟಿ ಇತ್ತೀಚೆಗೆ ಖರೀದಿಸಿದ್ದ ಕಾರನ್ನು ಬಳಸಿ ತಪ್ಪಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಸಧ್ಯ ಕಾರು ಹೊನ್ನಾವರ ಲೊಕೇಶನ್ ತೋರಿಸುತ್ತಿದ್ದು, ಅರೋಪಿಗಳು ಉತ್ತರ ಕರ್ನಾಟಕ ಭಾಗದವರು ಇರಬಹುದು ಎಂದು ಅಂದಾಜಿಸಲಾಗಿದೆ. ಕೃತ್ಯ ನಡೆಸಲು ಕಾರಣವೇನು ಎನ್ನುವುದು ಇನ್ನಷ್ಟೆ ತಿಳಿದು ಬರಬೇಕಿದೆ. ಕಂಡ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.