ತಾಲ್ಲೂಕು ಕಚೇರಿಯಲ್ಲಿ ಆಕಸ್ಮಿಕ ಕಾಣಿಸಿಕೊಂಡ ಬೆಂಕಿಯನ್ನು ಅಗ್ನಿಶಾಮಕ ದಳನಂದಿಸಿತು

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ತಾಲ್ಲೂಕು ಕಚೇರಿಯ ಚುನಾವಣಾ ವಿಭಾಗದದಲ್ಲಿ ಶನಿವಾರ ಕಾಣಿಸಿಕೊಂಡ ಆಕಸ್ಮಿಕ ಬೆಂಕಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ನಂದಿಸಿದರು.
ಶನಿವಾರ ಬೆಳಿಗ್ಗೆ ಕಚೇರಿ ಕಿಟಕಿಯಿಂದ ಹೊಗೆ ಬರುತ್ತಿದುದನ್ನು ಕಂಡ ಸಾರ್ವಜನಿಕರು ಕಚೇರಿ ಸಿಬ್ಬಂದಿ ಹಾಗೂ ಅಗ್ನಿಶಾಕಕ ದಳದ ಗಮನಕ್ಕೆ ತಂದರು. ತಕ್ಷಣ ಸ್ಥಳಕ್ಕೆ ಧಾವಿಸಿದ ಕಂದಾಯ ನಿರೀಕ್ಷಕರಾ ಬಿ.ವಿ.ಮುನಿರೆಡ್ಡಿ, ಬಲರಾಮಯ್ಯ ಅಗ್ನಿ ಶಾಮಕ ದಳದ ಸಿಬ್ಬಂದಿ ಕಚೇರಿ ಪ್ರವೇಶಿಸಲು ಅನುಕೂಲ ಮಾಡಿಕೊಟ್ಟರು.
ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಉಪಕರಣಗಳೊಂದಿಗೆ ಕಚೇರಿ ಪ್ರವೇಶಿಸಿ ಬೆಂಕಿ ಆರಿಸಿದರು. ಬೆಂಕಿಗೆ ವಿದ್ಯುತ್ ಶಾರ್ಟ್ ಸಕ್ರ್ಯೂಟ್ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಕೆಲವು ಕಡತಗಳು ಬೆಂಕಿಗೆ ಆಹುತಿಯಾಗಿವೆ. ಬೇಗ ಬೆಂಕಿ ಆರಿಸಿದ್ದರಿಂದ ಹೆಚ್ಚಿನ ಹಾನಿ ಉಂಟಾಗಿಲ್ಲ.
ಪೊಲೀಸ್ ಇನ್ಸ್‍ಪೆಕ್ಟರ್ ಸಿ.ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.