ಮೈಸೂರು ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ : ಜೊತೆಗಿದ್ದ ಗೆಳೆಯನು ಮಾಹಿತಿ ನೀಡಿದ್ದಾನೆ

JANANUDI.COM NETWORK


ಮೈಸೂರು, ಆಗಸ್ಟ್ 25: ಶಾಂತಿ ಹಾಗೂ ಸೌಹಾರ್ದತೆಗೆ ಹೆಸರಾಗಿರುವ ಸಾಂಸ್ಕೃತಿಕ, ಪ್ರವಾಸಿ ನಗರಿಯಾದ ಮೈಸೂರು ಇದೀಗ ಅಪರಾಧಗಳ ನಗರ ಎಂದು ಬದಲಾಗುತ್ತಿದೆ. ಈಗ ಮೈಸೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳು ಮೈಸೂರಿಗರನ್ನು ಬೆಚ್ಚಿಬೀಳಿಸಿದೆ.
ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಘೋರ ಘಟನೆ ಕುರಿತು ಯುವತಿಯ ಗೆಳೆಯ ಈ ಕೆಳಗಿನಂತೆ ಮಾಹಿತಿ ಕೊಟ್ಟಿದ್ದಾನೆ
“ನಾವು ವಿಹಾರಕ್ಕೆ ಹೋದಾಗ ದುಷ್ಕರ್ಮಿಗಳು ನಮ್ಮ ಜೊತೆ ಗಲಾಟೆ ಮಾಡಿ, ನನ್ನ ತಲೆಗೆ ಕಲ್ಲಿನಿಂದ ಹೊಡೆದರು. ನಾನು ಪ್ರಜ್ಞೆ ತಪ್ಪಿ ಬಿದ್ದಾಗ ಹುಡುಗಿಯನ್ನು ದೂರ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ,” ಎಂದು ಅತ್ಯಾಚಾರ ಸಂತ್ರಸ್ತೆಯ ಗೆಳೆಯ ಹೇಳಿದ್ದಾನೆ. “ನಾನು ನನ್ನ ಸ್ನೇಹಿತೆ ವಿಹಾರಕ್ಕೆ ಬಂದಿದ್ದೆವು. ಈ ವೇಳೆ ಅಲ್ಲೇ ಮದ್ಯ ಕುಡಿಯುತಿದ್ದ ್ದ್ದ 5-6 ಜನರು ಗಲಾಟೆ ಶುರು ಮಾಡಿದರು. ಇದರಲ್ಲಿ ಎಲ್ಲರೂ ಕನ್ನಡ ಮಾತಾಡುತ್ತಿದ್ದರು. ಒಬ್ಬ ಮಾತ್ರ ಬೇರೆ ಬಾಷೆ ಮಾತಾಡುತ್ತಿದ್ದ.” “ಇದೇ ಸಂದರ್ಭದಲ್ಲಿ ಗಲಾಟೆ ಮಾಡಿದವರು ನನಗೆ ಕಲ್ಲಿನಲ್ಲಿ ತಲೆಗೆ ಹೊಡೆದರು. ಆಗ ನಾನು ಪ್ರಜ್ಞೆ ತಪ್ಪಿ ಬಿದ್ದೆ. ನಂತರ ಹುಡುಗಿಯನ್ನು ದೂರ ಕರೆದುಕೊಂಡು ಹೋಗಿ ಅತ್ಯಚಾರ ಮಾಡಿದರು,” ಎಂದು ಯುವಕ ನಡೆದ ಅತ್ಯಾಚಾರ ಘಟನೆಯನ್ನು ವಿವರಿಸಿದ್ದಾನೆ.
ಸದ್ಯ ಯುವಕ ಹಾಗೂ ಯುವತಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಪಿಗಳ ವಿರುದ್ಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಯುವತಿ ಉತ್ತರ ಭಾರತ ಮೂಲದವಳಾಗಿದ್ದಾಳೆ ಎನ್ನಲಾಗಿದೆ. ಸಾಮೂಹಿಕ ಅತ್ಯಾಚಾರ ಕೃತ್ಯ ನಡೆದಿರುವ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಕೃತ್ಯ ನಡೆದಿರುವ ಬಗ್ಗೆ ಸ್ಥಳದಲ್ಲಿ ಸಾಕ್ಷ್ಯ ಸಂಗ್ರಹಿಸುತ್ತಿದ್ದಾರೆ