

ಕುಂದಾಪುರ, ಡಿಸೆಂಬರ್.17: ಐ.ಎಮ್. ಜೆ ವಿದ್ಯಾ ಸಂಸ್ಥೆಯ ಅಂಗ ಸಂಸ್ಥೆ ಆಗಿರುವ ವಿದ್ಯಾ ಅಕಾಡೆಮಿ ಯಲ್ಲಿ ಎರಡನೇ ವರ್ಷದ ಕ್ರೀಡೋತ್ಸವ ಕಾರ್ಯಕ್ರಮವು, ವಿದ್ಯಾರ್ಥಿಗಳು ಹಾಗೂ ಪೋಷಕರ ಉಪಸ್ಥಿತಿಯಲ್ಲಿ ಸಂಭ್ರಮದಿಂದ ನೆರೆವೇರಿತು.
ಈ ಕಾರ್ಯಾರಂಭವನ್ನು ಐ ಎಂ ಜೆ ವಿದ್ಯಾಸಂಸ್ಥೆಯ ನಿರ್ದೇಶಕರಾದ ಪ್ರೊ. ದೋಮ ಚಂದ್ರಶೇಖರ್ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು, ಉದ್ಘಾಟನಾ ಸಮಾರಂಭದಲ್ಲಿ ಎಂ ಐ ಟ ಕಾಲೇಜಿನ ಅಡ್ಮಿನಿಸ್ಟ್ರೇಷನ್ ಆಫೀಸರ್ ಶ್ರೀ ಪ್ರದೀಪ್ ಕುಮಾರ್, ಪಿ ರ್ ಓ ಶ್ರೀ ಸುಧೀರ್ ಹೆಗ್ಡೆ ಹಾಗೂ ದೈಹಿಕ ಶಿಕ್ಷಕ ಶ್ರೀ ಪ್ರವೀಣ್ ಖಾರ್ವಿ ಅವರು ಭಾಗವಹಿಸಿದ್ದರು,
ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು ಪೋಷಕರಿಗೆ ಹಗ್ಗ ಜಗ್ಗಾಟ, ಮ್ಯೂಸಿಕಲ್ ಚೇರ್ ನಂತಹ ಕ್ರೀಡೆಗಳು ಜರಗಿದವು, ವಿದ್ಯಾ ಅಕ್ಯಾಡೆಮಿ ಯಾ ಸಿಬ್ಬಂದಿವರ್ಗ ಕಾರ್ಯಕ್ರಮವನ್ನು ಬಹಳ ಅಚ್ಚುಕಟ್ಟಾಗಿ ನೆರವೇರಿಸಿ ಕೊಟ್ಟರು.