ಕಾಂಗ್ರೆಸ್ ನಾಯಕತ್ವದ ಮೇಲೆ ನಂಬಿಕೆಯಿಟ್ಟು ಸ್ವಯಂ ಪ್ರೇರಣೆಯಿಂದ ಪಕ್ಷಕ್ಕೆ ಬರುವವರನ್ನು ಪ್ರೀತಿಯಿಂದ ಬರಮಾಡಿಕೊಳ್ಳಲಾಗುವುದು:ಕೆ.ಆರ್.ರಮೇಶ್ ಕುಮಾರ್

ವರದಿ:ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ,       (ಸಂಪಾದಕರು: ಬರ್ನಾಡ್ ಡಿ’ಕೋಸ್ತಾ)

ಶ್ರೀನಿವಾಸಪುರ: ಕಾಂಗ್ರೆಸ್ ನಾಯಕತ್ವದ ಮೇಲೆ ನಂಬಿಕೆಯಿಟ್ಟು ಸ್ವಯಂ ಪ್ರೇರಣೆಯಿಂದ ಪಕ್ಷಕ್ಕೆ ಬರುವವರನ್ನು ಪ್ರೀತಿಯಿಂದ ಬರಮಾಡಿಕೊಳ್ಳಲಾಗುವುದುಎಂದು ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ತಾಲ್ಲೂಕಿನ ಅಡ್ಡಗಲ್ ಗ್ರಾಮದ ತಮ್ಮ ನಿವಾಸದಲ್ಲಿ ಗುರುವಾರ ರಮೇಶ್ ನಗರದ ಜೆಡಿಎಸ್ ಬೆಂಬಲಿಗರಾದ ಬರ್ಕತ್ ಅಲಿ, ಚಾಂದ್, ಮಿಟ್ಟುಸಾಬ್ ಸೇರಿದಂತೆ 11 ಕುಟುಂಗಳ ಸದಸ್ಯರನ್ನು ಕಾಂಗ್ರೆಸ್‍ಗೆ ಬರಮಾಡಿಕೊಂಡು ಮಾತನಾಡಿದರು.
ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮವಹಿಸಿ ಕೆಲಸ ಮಾಡುತ್ತಿದ್ದೇನೆ. ಕೆಸಿ ವ್ಯಾಲಿ ನೀರು ಜಿಲ್ಲೆಗೆ ಹರಿದು ಬಂದಿದೆ. ಕ್ಷೇತ್ರದ ಕೆಲವು ಕೆರೆಗಳನ್ನು ತುಂಬಿದೆ. ಹಂತ ಹಂತವಾಗಿ ಉಳಿದ ಕೆರೆಗಳಿಗೆ ನೀರು ಹರಿಸಲಾಗುವುದು. ರಸ್ತೆ ಹಾಗೂ ಕುಡಿಯುವ ನೀರು ಸೌಲಭ್ಯ ಒದಗಿಸಲು ಆದ್ಯತೆ ನೀಡಲಾಗಿದೆ. ವಸತಿ ಇಲ್ಲದ ಬಡವರಿಗೆ ಇನ್ನಷ್ಟು ಮನೆಗಳನ್ನು ನಿರ್ಮಿಸಿಕೊಡಲಾಗುವುದು. ಬದ್ಧತೆಯಿಂದ ಕೆಲಸ ಮಾಡಿ, ಸರ್ಕಾರದ ಸೌಲಭ್ಯ ಪಕ್ಷಾತೀತವಾಗಿ ಎಲ್ಲ ಅರ್ಹ ಫಲಾನುಭವಿಗಳಿಗೆ ತಲುಪಿಸಲಾಗುತ್ತಿದೆ ಎಂದು ಹೇಳಿದರು.
ಮುಖಂಡರಾದ ಎನ್.ಜಿ.ಬ್ಯಾಟಪ್ಪ, ನಾರಾಯಣಸ್ವಾಮಿ, ಹೈದರ್ ಸಾಬಿ, ಶಶಿಕುಮಾರ್, ಪ್ರಸನ್ನಕುಮಾರ್, ವೆಂಟರವಣ, ಚಾಂದ್ ಪಾಷ, ಮೆಹಬೂಬ್ ಪಾಷ, ಅಮ್ಜದ್ ಪಾಷ ಇದ್ದರು.