ಎಲ್ಲಾ ಪತ್ರಕರ್ತರ ಗಮನಕ್ಕೆ – ಕೋಲಾರ ನಗರದ ಎಲ್ಲಾ ಪತ್ರಕರ್ತರು ಮತ್ತು ಸಂಪಾದಕರು ಹಾಗೂ ಜಿಲ್ಲಾ ವರದಿಗಾರರ ಸಭೆಗೆ ಆಹ್ವಾನ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಕೋಲಾರ,ಮೇ.17: ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಚಟುವಟಿಕೆಗಳು ಮತ್ತು ಕಾರ್ಯನಿರತ ಪತ್ರಕರ್ತರ ಸಮಸ್ಯೆಗಳ ಪರಿಹಾರ ಹಾಗೂ ಸಮಾಲೋಚನಾ ಸಭೆಯನ್ನು ದಿನಾಂಕ 20-5-2022 ರಂದು ಶುಕ್ರವಾರ ಬೆಳಗ್ಗೆ 9-30 ಗಂಟೆಗೆ ಕೋಲಾರದ ಪತ್ರಕರ್ತರ ಭವನದಲ್ಲಿ ಸಂಘದ ಅಧ್ಯಕ್ಷ ಬಿ.ವಿ ಗೋಪಿನಾಥ್ ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಸಭೆಯಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಎಸ್ ಗಣೇಶ್, ಸಂಘದ ಮಾಜಿ ಅಧ್ಯಕ್ಷ ವಿ.ಮುನಿರಾಜು ಇವರು ಸಹ ಉಪಸ್ಥಿತರಿರುವರು.
ಕೋಲಾರ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ವೇಳೆ ಪತ್ರಕರ್ತರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಅವುಗಳಿಗೆ ಪರಿಹಾರೋಪಾಯ, ಸಂಘದ ಕಡೆಯಿಂದ ಪತ್ರಕರ್ತರ ಕಲ್ಯಾಣಕ್ಕಾಗಿ ಹಮ್ಮಿಕೊಳ್ಳಬಹುದಾದ ಕಾರ್ಯಕ್ರಮಗಳು, ಸಂಘದ ಮುಂದಿನ ಕಾರ್ಯಚಟುವಟಿಕೆಗಳು ಮತ್ತಿತರ ವಿಚಾರಗಳ ಕುರಿತು ಸಮಾಲೋಚನೆಗಾಗಿ ಈ ಸಭೆಯನ್ನು ಆಯೋಜಿಸಲಾಗಿದೆ.
ಬೆಳಗ್ಗೆ 9-30 ಗಂಟೆಗೆ ಆರಂಭವಾಗುವ ಸಮಾಲೋಚನಾ ಸಭೆಯಲ್ಲಿ ಕೋಲಾರ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಪತ್ರಕರ್ತರು, ಪತ್ರಿಕಾ ಸಂಪಾದಕರು, ರಾಜ್ಯಮಟ್ಟದ ಪತ್ರಿಕೆಗಳ ಜಿಲ್ಲಾ ವರದಿಗಾರರು ಹಾಗೂ ದೃಶ್ಯ ಮಾಧ್ಯಮಗಳ ಎಲ್ಲಾ ವರದಿಗಾರರು, ಕ್ಯಾಮರಾಮೆನ್‍ಗಳು ಭಾಗವಹಿಸಲು ಕೋರಿದೆ.
ಸಭೆಯ ನಂತರ ಸಣ್ಣ ಪತ್ರಿಕೆಗಳ ಸಂಪಾದಕರ ಸಭೆಯು ಸಹ ಪ್ರತ್ಯೆಕವಾಗಿ ನಡೆಯಲಿದೆ.
ಈ ಸಭೆಯಲ್ಲಿ ಎಲ್ಲಾ ಪತ್ರಕರ್ತರು, ಸಂಪಾದಕರುಗಳು, ದೃಶ್ಯ ಮಾಧ್ಯಮಗಳ ಎಲ್ಲಾ ವರದಿಗಾರರು, ಕ್ಯಾಮರಾಮೆನ್‍ಗಳು ತಪ್ಪದೇ ಭಾಗವಹಿಸಬೇಕೆಂದು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಕೆ ಚಂದ್ರಶೇಖರ್, ಖಜಾಂಚಿ ಎ.ಜಿ ಸುರೇಶ್‍ಕುಮಾರ್ ಕೋರಿದ್ದಾರೆ.

ವಿಶೇಷ ಸೂಚನೆ: ಅಂದು ಬೆಳಗ್ಗೆ 9-00 ಗಂಟೆಗೆ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿದೆ.