ಸಂಕಷ್ಟದಲ್ಲಿರು ಪ್ರತಿ ಕುಟುಂಬಕ್ಕೆ 10 ಸಾವಿರ ರೂಪಾಯಿ ಮತ್ತು10 ಕೆ.ಜಿ ಅಕ್ಕಿ ನೀಡಲು ;ಸಿದ್ದರಾಮಯ್ಯ ಸರ್ಕಾರಕ್ಕೆ ಪತ್ರ

JANANUDI.COM NETWORK

ಬೆಂಗಳೂರು:ಮೇ. 9; ನಾಳೆಯಿಂದ ರಾಜ್ಯಾದ್ಯಂತ ಲಾಕ್ ಡೌನ್ ಜಾರಿಗೆ ಬರುತ್ತಿದ್ದು, ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿರುವ,ಬಡ, ದುಡಿಯುವ ವರ್ಗಕ್ಕೆ ನೆರವು ನೀಡ ಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದಾರೆ.

ಕೊರೊನಾ ಮಾಹಾಮಾರಿಯಿಂದಾಗಿ ಈಗಾಗಲೇ ಹಲವು ಕ್ಷೇತ್ರಗಳ ಜನರು ಆರ್ಥಿಕ ಸಂಕಷ್ಟಕ್ಕೀಡಾಗಿದ್ದಾರೆ. ಅನೇಕರು ಉದ್ಯೋಗಗಳನ್ನು ಕಳೆದುಕೊಂಡಿದ್ದಾರೆ. ಲಾಕ್ ಡೌನ್ ಜಾರಿಯಾಗುತ್ತಿರುವುದರಿಂದ ನಗರಗಳನ್ನು ತೊರೆದು ಹಳ್ಳಿಗಳತ್ತ ತೆರಳಲು ಸಿದ್ದವಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಬಡವರ, ಆರ್ಥಿಕ ಸಂಕಷ್ಟದಲ್ಲಿರುವರ ನೆರವಿಗೆ ನಿಲ್ಲಬೇಕು.

    ಹಾಗಾಗಿ ಪ್ರತಿ ಕುಟುಬಕ್ಕೆ 10 ಕೆಜಿ ಅಕ್ಕಿ, ಬೇಳೆ, ಅಡುಗೆ ಎಣ್ಣೆ ಮುಂತಾದ ದಿನಸಿ ಪದಾರ್ಥಗಳ ಕಿಟ್ ನೀಡಬೇಕು. ರೈತರು, ಕುಶಲಕರ್ಮಿಗಳು, ಕಾರ್ಮಿಕರು, ಚಾಲಕರು ಹಾಗೂ ಪ್ರತಿ ಬಿಪಿಎಲ್ ಕುಟುಂಬಗಳಿಗೆ ಆರಂಭದಲ್ಲಿ 10,000 ರೂಪಾಯಿಗಳನ್ನು ನಂತರ ತಿಂಗಳಿಗೆ 6000 ರೂ. ಗಳನ್ನು ನೀಡಬೇಕು ಎಂದು ಪತ್ರದ ಮುಖಾಂತರ ಮನವಿ ಮಾಡಿದ್ದಾರೆ.