ಆಗುಂಬೆ ಘಾಟಿಯಲ್ಲಿ ಸಂಚಾರ ಬಂದ್- ಪ್ರಯಾಣಿಕರು ಪರ್ಯಾಯ ಮಾರ್ಗ ಅನುಸರಿಸಿ

JANANUDI.COM NETWORK

ತೀರ್ಥಹಳ್ಳಿ: ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ -ಹೆಬ್ರಿ ವರೆಗಿನ ರಸ್ತೆ ಡಾಂಬರೀಕರಣ ಕಾರಣದಿಂದಾಗಿ, ಮಾರ್ಚ್ 5 ರಿಂದ 15ನೇ ತಾರೀಕಿನವರೆಗೆ ಹತ್ತು ದಿನಗಳ ಕಾಲ ಆಗುಂಬೆ ಘಾಟಿ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.
ಈ ಹಿನ್ನೆಲೆಯಲ್ಲಿ ವಾಹನ ಸವಾರರು ಹಾಗೂ ಪ್ರಯಾಣಿಕರು ಪರ್ಯಾಯ ಮಾರ್ಗ ಅನುಸರಿಸುವಂತೆ ಪೊಲೀಸ್ ಇಲಾಖೆ ತಿಳಿಸಿದೆ.