ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ.

JANANUDI.COM NETWORK


ಕುಂದಾಪುರ ತಾಲೂಕಿನ ಪ್ರತಿಷ್ಠಿತ ಸಂಸ್ಥೆಯಾದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ,  ವಿಧ್ಯಾರ್ಥಿಗಳಿಗೆ ನೆನಪಿನ ಶಕ್ತಿ ವೃದ್ಧಿಸುವ ಹಾಗೂ ಪರಿಣಾಮಕಾರಿ ಕಲಿಕೆ ಕುರಿತಾದ ತರಬೇತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.- ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಉಪ ಪ್ರಾಂಶುಪಾಲರಾದ ಪ್ರೊಫೆಸರ್.  ಮೆಲ್ವಿನ್ ಡಿಸೋಜ ಇವರು ಸಂಪನ್ಮೂಲ ವ್ಯಕ್ತಿ ಯಾಗಿದ್ದು , ವಿದ್ಯಾರ್ಥಿಗಳು ಯಾವ ರೀತಿಯಲ್ಲಿ ತಮ್ಮ ಎಡ ಹಾಗೂ ಬಲ ಭಾಗದ ಮೆದುಳನ್ನು ಸಮತೋಲನದಲ್ಲಿ ಇರಿಸಿಕೊಂಡು ನೆನಪಿನ ಶಕ್ತಿ ಹೆಚ್ಚಿಸ ಬೇಕು ಎಂಬುದನ್ನು ತಿಳಿಸಿಕೊಟ್ಟರು.
ಸಂಸ್ಥೆಯ ಮುಖ್ಯಸ್ಥರು ಹಾಗೂ ಪ್ರಾಂಶುಪಾಲರಾದ ಡಾ. ರಮೇಶ್ ಶೆಟ್ಟಿ ಇವರು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮೂಡ್ಲಕಟ್ಟೆ ಎಂ ಐ ಟಿ ಯ, ಪಬ್ಲಿಸಿಟಿ ಅಂಡ್ ಡೆವಲಪ್ಮೆಂಟ್  ವಿಭಾಗದ  ಡೀನ್   ಪ್ರೊ.ಕಿಶೋರ್ ಕುಮಾರ್ ಆರೂರ್ ಹಾಗೂ ಎಕ್ಸಲೆಂಟ್ ಕಾಲೇಜಿನ ಅನೇಕ ಉಪನ್ಯಾಸಕರು ಉಪಸ್ಥಿತರಿದ್ದರು.