ಉಡುಪಿ ಜಿಲ್ಲಾಧಿರಿ ಜಗದೀಶ್ ವರ್ಗಾವಣೆ, ನೂತನ ಜಿಲ್ಲಾಧಿಕಾರಿಯಾಗಿ ಕೂರ್ಮ ರಾವ್

JANANUDI.COM NETWORK


ಉಡುಪಿ : ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಜಿ.ಜಗದೀಶ್ ಅವರನ್ನು ವರ್ಗಾಯಿಸಿ ರಾಜ್ಯ ಸರಕಾರ ಇಂದು ಆದೇಶ ಹೊರಡಿಸಿದೆ. ಜಿಲ್ಲೆಗೆ ಅವರ ಬದಲಿಗೆ ನೂತನ ಜಿಲ್ಲಾಧಿಕಾರಿಯಾಗಿ ಎಂ. ಕೂರ್ಮರಾವ್ ಅವರನ್ನು ನೇಮಕ ಮಾಡಿದೆ.
ಜಿ. ಜಗದೀಶ್ ಅವರನ್ನು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ಭಡ್ತಿ ನೀಡಿ ವರ್ಗಾವಣೆ ಮಾಡಲಾಗಿದ್ರೆ, ಕಲಬುರಗಿಯಲ್ಲಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಕೂರ್ಮರಾವ್ ಅವರನ್ನು ಉಡುಪಿಗೆ ವರ್ಗಾವಣೆ ಮಾಡಲಾಗಿದೆ. 2019 ರಿಂದ ಅಗಸ್ಟ್ 20ರಂದು ಉಡುಪಿ ಜಿಲ್ಲಾಧಿಕಾರಿಯಾಗಿ ಜಿ.ಜಗದೀಶ್ ಅವರು ಅಧಿಕಾರ ವಹಿಸಿದ್ದರು.
ಉಡುಪಿ ಜಿಲ್ಲಾಧಿಕಾರಿಯಾಗಿದ್ದಾಗ ಜಿ.ಜಗದೀಶ್ ಜಿಲ್ಲೆಯಲ್ಲಿ ಹಲವು ಸುಧಾರಣೆಗಳನ್ನು ಮಾಡಿದ್ದರು.. ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರ ಅನುಪಸ್ಥಿತಿಯಲ್ಲಿಯೂ ಕೊರೊನಾ ವೈರಸ್ ನಿಯಂತ್ರಣ ಕಾರ್ಯವನ್ನು ಯಶಸ್ವಿಯಾಗಿ ನಡೆಸಿದ್ದರು.. ಮಾತ್ರವಲ್ಲದೇ ಕಂದಾಯ ಇಲಾಖೆಯಲ್ಲಿಯೂ ಜಿಲ್ಲೆಗೆ ಹಲವು ಪ್ರಶಸ್ತಿಗಳನ್ನು ತಂದುಕೊಡುವಲ್ಲಿ ಶ್ರಮಿಸಿದ್ದರು.