

ಉಡುಪಿ: ನಗರದ ಬನ್ನಂಜೆಯಲ್ಲಿರುವ ಜಯಲಕ್ಷ್ಮೀ ಸಿಲ್ಕ್ನಲ್ಲಿ ಇಂದು ಮಧ್ಯಾಹ್ನ ಪಿಸ್ತೂಲ್ ನಿಂದ ಮಿಸ್ ಫೈರಿಂಗ್ ಆದ ಘಟನೆಯಿಂದ ಸಿಬ್ಬಂದಿಯೋರ್ವರು ಗಾಯಗೊಂಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ
ಪಿಸ್ತೂಲ್ ನ್ನು ಮಳಿಗೆಯಲ್ಲಿ ಯಾರೋ ಬಿಟ್ಟು ಹೋಗಿದ್ದು ಎನ್ನಲಾಗಿದೆ. ಪತ್ತೆಯಾಗಿತ್ತು ಪಿಸ್ತೂಲ್ ಎತ್ತಿಕೊಂಡ ಸಿಬ್ಬಂದಿ ಆಪರೇಟ್ ಮಾಡಿ ಪರೀಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ಪಿಸ್ತೂಲಿನಿಂದ ಗುಂಡು ಹಾರಿದೆ. ಪರಿಣಾಮ ಅಲ್ಲೇ ಇದ್ದ ಇನ್ನೋರ್ವ ಸಿಬ್ಬಂದಿಗೆ ಆ ಗುಂಡು ತಗುಲಿದೆ. ಅವರನ್ನು ಕೂಡಲೇ ಉಡುಪಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಯಲಾಗಿದೆ. ಗಾಯಗೊಂಡವರು ದುರ್ಗಪ್ಪ ಎಂದು ತಿಳಿಯಲಾಗಿದೆ.
ಪಿಸ್ತೂಲ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಅಲ್ಲಿದ್ದ ಪಿಸ್ತೂಲ್ ಯಾರದ್ದು..? ಅಲ್ಲಿ ಹೇಗೆ ಬಂತು ? ಆ ಬಟ್ಟೆ ಮಳಿಗೆಯಲ್ಲಿ ತಂದಿಟ್ಟಿದ್ದು ಯಾರು..? ಎಂದು ಪೊಲೀಸ್ ತನಿಖೆಯಲ್ಲಿ ತಿಳಿದು ಬರಬೇಕಿದೆ.ಉಡುಪಿ ನಗರ ಪೊಲೀಸರು ಈ ಪ್ರಕರಣವನ್ನು ತನಿಖೆ ನಡೆಸುತ್ತಿದ್ದಾರೆ.