

ಬೈಂದೂರು:- ವಿದ್ಯಾರ್ಥಿಗಳಿಗೆ ಬೇಕಾದ ಎಲ್ಲಾ ಮೂಲಭೂತ ಸೌಕರ್ಯವನ್ನು ನಮ್ಮ ವತಿಯಿಂದ ಉಚಿತವಾಗಿ ಒದಗಿಸಲಾಗುತ್ತಿದೆ
ಈ ಶಾಲೆಯನ್ನು ಶೈಕ್ಷಣಿಕವಾಗಿ ಭೌತಿಕವಾಗಿ ಅಭಿವೃದ್ಧಿಪಡಿಸಲು ಟ್ರಸ್ಟ್ ವತಿಯಿಂದ ಎಲ್ಲಾ ಸೌಕರ್ಯಗಳನ್ನು ನೀಡಲಾಗುವುದು
ಉಪ್ಪುಂದ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ನ ಡಾ. ಗೋವಿಂದ ಬಾಬು ಪೂಜಾರಿಯವರು ಸಭೆಯಲ್ಲಿ ನುಡಿದರು
ಅವರು ಬಿಜೂರು ಪ್ರಾಥಮಿಕ ಶಾಲೆಯ ಪೋಷಕ ಶಿಕ್ಷಕ ಮತ್ತು ವಿದ್ಯಾರ್ಥಿಗಳಲ್ಲಿ ಭಾಗವಹಿಸಿ ಸುಮಾರು ಲಕ್ಷಕ್ಕೂ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿದರು ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳಿಗೂ ಕೂಡ ಪುಸ್ತಕ ವಿತರಿಸುತ್ತಾ ಮಾತನಾಡಿ ಸರ್ಕಾರಿ ಶಾಲೆಯನ್ನು ಯಾವುದೇ ಖಾಸಗಿ ಶಾಲೆಗಿಂತಲೂ ಕಡಿಮೆ ಇಲ್ಲದಂತೆ ಅಭಿವೃದ್ಧಿಗೊಳಿಸುವುದು ನಮ್ಮ ಮುಖ್ಯ ಉದ್ದೇಶ ಎಂದು ಈವೇಜನೆಗಳನ್ನು ಹಮ್ಮಿಕೊಂಡಿರುವುದು
ಒಂದೊಂದೇ ಶಾಲೆಯ ಅವಶ್ಯಕತೆಗಳನ್ನು ಪೂರ್ಣಗೊಳಿಸುವುದಾಗಿ ಶಾಲೆಯ ಉಳುವಿಗೆ ಪೋಷಕರು ಶಿಕ್ಷಕರು ಮತ್ತು ಶಿಕ್ಷಣ ಅಭಿಮಾನಿಗಳು ಸಹಕಾರ ನೀಡಬೇಕೆಂದು ಕೋರಿಕೊಂಡರು
ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷೆ ಶಾರದಾ ಅಧ್ಯಕ್ಷ ಸ್ಥಾನದಲ್ಲಿ ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೇಂದ್ರ ಪಿ. ಪೋಷಕ ಪ್ರತಿನಿಧಿಗಳು ಉಪಸ್ಥಿತರಿದ್ದರು
ಶಾಲಾ ಮುಖ್ಯ ಶಿಕ್ಷಕ ಮಂಜುನಾಥ್ ಬಿಜೂರು ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಕ ಭಾಷಣ ಮಾಡಿದರು ಗೌರವ ಶಿಕ್ಷಕಿ ಭಾರತಿ ಕಾರ್ಯಕ್ರಮ ನಿರೂಪಣೆ ಗೈದರು, ಪ್ರತಿಮಾ ವಂದಿಸಿದರು.
















