ಪ್ರತಿಷ್ಠಿತ ವಡ್ಡರ್ಸೆ ರಘುರಾಮ್ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಕುಂದಪ್ರಭ ಸಂಪಾದಕ ಯು.ಎಸ್.ಶೆಣೈ ಆಯ್ಕೆ

JANANUDI.COM NETWORK

ಕೋಟ, ಡಿ.15: ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ವತಿಯಿ0ದ ಕೊಡಮಾಡುವ ಪ್ರತಿಷ್ಠಿತ ವಡ್ಡರ್ಸೆ ರಘುರಾಮ್ ಶೆಟ್ಟಿ ಪತ್ರಿಕೋದ್ಯಮ ಈ ವರ್ಷದ ಪ್ರಶಸ್ತಿಗೆ ಹಿರಿಯ ಪತ್ರಕರ್ತ, ಕುಂದಪ್ರಭ ವಾರಪತ್ರಿಕೆಯ ಸಂಪಾದಕ ಯು.ಎಸ್.ಶೆಣೈ ಆಯ್ಕೆ ಯಾಗಿದ್ದಾರೆ.
ಈ ಪ್ರಶಸ್ತಿಯನ್ನು ಡಿ.26ರ0ದು ಬ್ರಹ್ಮಾವರದ ಬ0ಟರ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಸ0ತೋμï ಹೆಗ್ಡೆ ಪ್ರಶಸ್ತಿ ಪ್ರದಾನ ಮಾಡಲಿರುವುರು.
ಪತ್ರಿಕೋದ್ಯಮ ಕ್ಷೇತ್ರದಲ್ಲಿ 40 ವರ್ಷ ಸೇವೆ ಸಲ್ಲಿಸಿರುವ ಶೆಣೈ 1991ರಲ್ಲಿ ಕುಂದಾಪುರ ತಾಲೂಕಿನ ಪ್ರಥಮ ಪತ್ರಿಕೆಯಾಗಿ ಕುಂದಪ್ರಭ ವಾರಪತ್ರಿಕೆಯನ್ನು ಆರಂಭಿಸಿದ್ದರು. ನಿರಂತರ ಮೂರು ದಶತಗಳಿ0ದ ಈ ಪತ್ರಿಕೆಯನ್ನು ನಡೆಸಿಕೊ0ಡು ಬ0ದಿರುವ ಹೆಗ್ಗಳಿಕೆ ಶೆಣೈಯವರದ್ದು ಸುಮಾರು 25ಕ್ಕೂ ಮಿಕ್ಕಿ ಯುವ ಪತ್ರತರ್ತರಿಗೆ ತರಬೇತಿ ನೀಡಿ ಪತ್ರಕರ್ತರಾಗಿ. ರೂಪು ಗೊಳಿಸಿರುವ ಇವರು, ಕುಂದಾಪುರದ 101 ಗ್ರಾಮಗಳು, ಪುಣ್ಯನದಿ ಪ0ಚ ಗ0ಗಾವಳಿ, ಕ0ಪ್ಯೂಟರ್ ಕಲಿಯಿರಿ, ಏಡ್ಸ್ ಮಹಾಮಾರಿ, ಇನ್ನಿತರ ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಮಂಗಳೂರಿನ ನವಭಾರತ, ಇ0ಡಿಯನ್ ಎಕ್ಸ್‍ಪ್ರೆಸ್, ಮು0ಗಾರು, ಹೊಸದಿಗ0ತ ಪತ್ರಿಕೆಗಳಲ್ಲೂ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದಾರೆ. ಕೊ0ಕಣಿಯಲ್ಲಿ “ಜೈ ಕೊಂಕಣಿ” ಮಾಸ ಪತ್ರಿಕೆಯ ಸಂಪಾದಕರಾಗಿಯೂ ಶತ್ರಿಕೆಯನ್ನು ನಡೆಸುತ್ತಿದ್ದಾರೆ.