ಮಾತುಬಾರದ ಬಾಲಕನ ಕೊಲೆ ಮಾಡಿ ಗೋಣಿ ಚೀಲದಲ್ಲಿ ತುಂಬಿ ಎಸೆದ ದುಷ್ಕರ್ಮಿಗಳು

JANANUDI.COM NETWORK

ಮುಂಬೈ: ಮಾತುಬಾರದ 13 ವರ್ಷದ ಬಾಲಕನನ್ನು ಕೊಲೆಗೈದು ಗೋಣಿ ಚೀಲದೊಳಗೆ ತುಂಬಿ ಎಸೆದಿರುವ ಅಮಾನುಷ್ಯ ಘಟನೆ ಪುಣೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಬಾಲಕನಿಗೆ ಮಾತು ಬರುತ್ತಿರಲಿಲ್ಲ. ಬಾಲಕನನ್ನು ಕೊಲೆ ಮಾಡಿ ಗೋಣಿ ಚೀಲದಲ್ಲಿ ತುಂಬಿ ಎಸೆದಿದ್ದು, ಕೊತ್ರುದ್ ಪ್ರದೇಶದಲ್ಲಿ ಗೋಣಿ ಚೀಲ ಒಂದರಲ್ಲಿ ಶವ ಪತ್ತೆಯಾಗಿದೆ. ಇದೊಂದು ಕೊಲೆ ಪ್ರಕರಣ ಎಂದು ಪೊಲೀಸರು ಶಂಕಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಸ್ಥಳಕ್ಕೆ ಕೊತ್ರುಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಲಕನ ಮೃತದೇಹದ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ. ಆದರೆ ಮರಣೋತ್ತರ ಪರೀಕ್ಷೆಯ ನಂತರವಷ್ಟೇ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಕೊತ್ರುಡ್ ಠಾಣಾ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.