ಕುಂದಾಪುರದಲ್ಲಿ ವಿದುಷಿ ಸುಜಾತ ಗುರವ್ ಹಿಂದುಸ್ಥಾನಿ ಗಾಯನ ನಡೆಯಲಿದೆ


ವಿದುಷಿ ಶ್ರೀಮತಿ ಸುಜಾತ ಗುರವ್ ಅವರ ಹಿಂದುಸ್ಥಾನಿ ಶಾಸ್ತ್ರೀಯ ಗಾಯನ ನ. 6 ರಂದು ಆದಿತ್ಯವಾರ ಕುಂದಾಪುರದ ಪಾರಿಜಾತ ಹೋಟೆಲ್‍ನ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಸಂಜೆ 6 ಗಂಟೆಗೆ ನಡೆಯಲಿದೆ.
ಕುಂದಾಪುರದ ಸಂಗೀತ ಭಾರತಿ ಟ್ರಸ್ಟ್ (ರಿ.) ಮತ್ತು ಆರ್. ಕೆ. ಸಂಜೀವ ರಾವ್ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್, ಖಂಬದಕೋಣೆ ಇವರ ಜಂಟಿ ಆಶ್ರಯದಲ್ಲಿ ಶ್ರೀಮತಿ ಸುಶೀಲಾ ಸಂಜೀವ ರಾವ್, ಶ್ರೀಮತಿ ನಿರ್ಮಲಾ ಪ್ರಕಾಶ್ ರಾವ್ ಮತ್ತು ಶ್ರೀ ಪ್ರಕಾಶ್ ರಾವ್ ಸ್ಮಾರಕ ಹಿಂದುಸ್ಥಾನಿ ಶಾಸ್ತ್ರೀಯ ಗಾಯನ ಕಾರ್ಯಕ್ರಮಕ್ಕೆ ಸಂಗೀತಾಸಕ್ತರನ್ನ ಆಹ್ವಾನಿಸಲಾಗಿದೆ.
ತಬಲಾದಲ್ಲಿ ಟಿ. ರಂಗ ಪೈ, ಮಣಿಪಾಲ, ಹಾರ್ಮೋನಿಯಂನಲ್ಲಿ ಶಶಿಕಿರಣ, ಮಣಿಪಾಲ ಸಹಕರಿಸಲಿದ್ದಾರೆ. ಶ್ರೀಮತಿ ಸುಜಾತ ಗುರವ್ ಪ್ರಸಿದ್ಧ ಸಂಗೀತಕಾರ ಸಂಗಮೇಶ್ವರ ಗುರವ್ ಅವರ ಪುತ್ರಿಯಾಗಿದ್ದಾರೆ. ಇವರ ಸಹೋದರ ಕೈವಲ್ಯ ಕುಮಾರ್ ಗುರವ್ ಸಹ ಇವರ ಗುರುವಾಗಿದ್ದಾರೆ.