ಮತದಾನ ಪ್ರಜಾಪ್ರಭುತ್ವದ ಹಬ್ಬ. ಪ್ರತಿ ಮತದಾರನೂ ತಪ್ಪದೆ ಮತದಾನ ಮಾಡಬೇಕು – ವಿ.ನಾಗರಾಜು ಹೇಳಿದರು

ಶ್ರೀನಿವಾಸಪುರ: ಮತದಾನ ಪ್ರಜಾಪ್ರಭುತ್ವದ ಹಬ್ಬ. ಪ್ರತಿ ಮತದಾರನೂ ತಪ್ಪದೆ ಮತದಾನ ಮಾಡಬೇಕು. ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಆಶಯ ಎತ್ತಿಹಿಡಿಯಬೇಕು ಎಂದು ಪುರಸಭೆ ಕಂದಾಯಾಧಿಕಾರಿ ವಿ.ನಾಗರಾಜು ಹೇಳಿದರು.
ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಪುರಸಭಾ ವಾಪ್ತಿಯ ವಿಕಲಚೇತನ ಮತದಾರರಿಗೆ ಬುಧವಾರ ಏರ್ಪಡಿಸಿದ್ದ ಮತದಾನದ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮತದಾನ ಒಂದು ಪವಿತ್ರವಾದ ಕರ್ತವ್ಯ. ದೇಶದ ಉತ್ತಮ ಭವಿಷ್ಯ ಮತದಾರರ ಕೈಯಲ್ಲಿದೆ. ಪ್ರತಿಯೊಬ್ಬ ಮತದಾರನೂ ಮತದಾನ ಮಾಡಿದಾಗ ಮಾತ್ರ ಜನಸತ್ತೆ ಬಲಗೊಳ್ಳುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಹಾಜರಿದ್ದ ಮತದಾರರಿಗೆ, ಮತದಾರರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಪುರಸಭೆ ಕಂದಾಯ ನಿರೀಕ್ಷಕ ಎನ್.ಶಂಕರ್, ಆರೋಗ್ಯ ನಿರೀಕ್ಷಕ ಕೆ.ಜಿ.ರಮೇಶ್, ಕಚೇರಿ ಸಿಬ್ಬಂದಿ ಇದ್ದರು.