

ಹಳ್ನಾಡಿನ ತುಳಸಿ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ” ವಿಶ್ವ ಪರಿಸರ ದಿನಾಚರಣೆ ” ಯ ಅಂಗವಾಗಿ ವಿಶೇಷ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಯಾಗಿ ಕಂಡ್ಲೂರಿನ ಪರಿಸರ ತಜ್ಞರು ಹಾಗೂ ಗೋವು ಪ್ರೇಮಿಯಾದ ಶ್ರೀ ವಾಸುದೇವ ಕಾಮತ್ ಆಗಮಿಸಿ ಶಾಲಾವರಣದಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ನಡೆದ ಸಭಾಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಸಸ್ಯಗಳು ಹಾಗೂ ಜೀವ ಸಂಕುಲಗಳ ಮಹತ್ವವನ್ನು ಕಥೆಯ ಮೂಲಕ ವಿವರಿಸಿ ಮಕ್ಕಳಲ್ಲಿ ಪರಿಸರ ಜಾಗೃತಿಯನ್ನು ಮೂಡಿಸಿದರು. ವರ್ಷಕ್ಕೆ ಒಂದು ಒಳ್ಳೆಯ ಗಿಡವನ್ನು ನೆಟ್ಟು ಆ ಮೂಲಕ ನಮ್ಮ ಜನ್ಮವನ್ನು ಸಾರ್ಥಕ ಮಾಡಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ರೇಷ್ಮ ಪ್ರದೀಪ್ ವೇದಿಕೆಯಲ್ಲಿ ಮಕ್ಕಳಿಗೆ ಪರಸರ ಸಂರಕ್ಷಣೆಯ ಪ್ರತಿಜ್ಞಾ ವಿಧಿ ಬೋಧಿಸಿದರು.
ತುಳಸಿ ಎಜ್ಯುಕೇಶನ್ ಟ್ರಸ್ಟ್ ನ ಮುಖ್ಯಸ್ಥರಾದ ಶ್ರೀಯುತ ಕೃಷ್ಣರಾಯ ಶಾನುಬಾಗ್ ರವರು ಮಾತನಾಡಿ ಗಿಡಮರಗಳು ಉಳಿದರೆ ಮಾತ್ರ ಜಗತ್ತು ಉಳಿಯುತ್ತದೆ.ಹಾಗಾಗಿ ಪ್ರಾಣಿ, ಪಕ್ಷಿ , ಪ್ರಕೃತಿಯನ್ನು ಉಳಿಸುವ ಕೆಲಸ ಮಾಡಬೇಕು ಎಂದರು. ತದನಂತರ ಶಾಲಾ ವಿದ್ಯಾರ್ಥಿಗಳು ಪರಿಸರ ಜಾಗೃತಿ ಕುರಿತು ಕಿರುನಾಟಕವನ್ನು ಪ್ರದರ್ಶಿಸಿದರು. ಕಾರ್ಯಕ್ರಮವನ್ನು ಒಂಭತ್ತನೇ ತರಗತಿ ವಿದ್ಯಾರ್ಥಿಗಳಾದ ಮನಸ್ವಿ ನಿರೂಪಿಸಿ, ಸಾಕ್ಷರ್ ಶೆಟ್ಟಿ ಸ್ವಾಗತಿಸಿ, ಮಾನ್ವಿ ಆಚಾರ್ಯ ವಂದಿಸಿದರು.
ಸಹಶಿಕ್ಷಕರು, ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತಿರಿದ್ದರು.




